65 ಸಾಧಕರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

247

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ 2020ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿ ಸಮಾರಂಭದಲ್ಲಿ ಸಾಧಕರಿಗೆ ಸಿಎಂ ಬಿ.ಎಸ್ ಯಡಿಯೂರಪ್ಪ ಪ್ರಶಸ್ತಿ ಪ್ರದಾನ ಮಾಡಿದ್ರು. ಈ ವೇಳೆ ಮಾತ್ನಾಡಿದ ಅವರು, ಕರ್ನಾಟದಲ್ಲಿ ಕನ್ನಡಕ್ಕೆ ಅಗ್ರಸ್ಥಾನ. ಈ ಬಗ್ಗೆ ಯಾರಿಗೂ ಸಂಶಯ ಬೇಡ ಎಂದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನಡೆದ ಕಾರ್ಯಕ್ರಮದಲ್ಲಿ 65 ಜನ ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಲಾಯ್ತು. ನವೆಂಬರ್ 1ರಂದು ಕಾರ್ಯಕ್ರಮ ಮಾಡಬೇಕಿತ್ತು. ಆದ್ರೆ, ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿದ್ದ ಕಾರಣಕ್ಕೆ ದಿನಾಂಕ ಮುಂದೂಡಲಾಗಿತ್ತು ಎಂದರು.

ಇದೇ ವೇಳೆ ಮಾತ್ನಾಡಿದ ಕನ್ನಡ ಮತ್ತು ಸಂಸ್ಕೃತ ಇಲಾಖೆ ಸಚಿವ ಸಿ.ಟಿ ರವಿ, ಒಂದು ವರ್ಷದಲ್ಲಿ ಇಲಾಖೆ ನನ್ಗೆ ಸಾಕಷ್ಟು ತೃಪ್ತಿ ನೀಡಿದೆ. ಇನ್ನೂ ಸುಧಾರಣೆ ತರಬೇಕಿದೆ. ಇದಕ್ಕಾಗಿ ಗುರಿ ಇಟ್ಟುಕೊಂಡಿದ್ದೆ. ಆದ್ರೆ, ಪಕ್ಷ ನನ್ಗೆ ಹೊಸ ಜವಾಬ್ದಾರಿ ಕೊಟ್ಟಿದೆ. ಆದ್ರಿಂದ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕಿದೆ. ಮುಂದೆ ಇಲಾಖೆಗೆ ಬರುವ ಸಚಿವರು ಒಳ್ಳೆಯ ಕೆಲಸ ಮಾಡಲಿ ಎಂದರು.




error: Content is protected !!