ಸೌಜನ್ಯ ಕೊಲೆ ಪ್ರಕರಣ, ಆರೋಪಿ ಖುಲಾಸೆ

188

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಕಳೆದ 11 ವರ್ಷಗಳ ಹಿಂದೆ ದಕ್ಷಣ ಕನ್ನಡ ಜಿಲ್ಲೆಯ ಉಜಿರೆಯ ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ, ಕೊಲೆಯ ಆರೋಪಿ ಸಂತೋಷ್ ರಾವ್ ನನ್ನು ಸಿಬಿಐ ಕೋರ್ಟ್ ಖುಲಾಸೆಗೊಳಿಸಿದೆ. ಸಾಕ್ಷಾಧಾರಗಳಲ್ಲಿ ಕೊರತೆ ಇದೆ ಎಂದು ಹೇಳಿ ಪ್ರಕರಣವನ್ನು ಖುಲಾಸೆಗೊಳಿಸಲಾಗಿದೆ.

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ ರಾಜ್ಯದಲ್ಲಿ ದೊಡ್ಡ ಮಟ್ಟದಲ್ಲಿ ಸುದ್ದಿಯಾಗಿತ್ತು. ಅಕ್ಟೋಬರ್ 9, 2012ರಲ್ಲಿ ಈ ಘಟನೆ ನಡೆದಿದೆ. ಕಾಲೇಜಿನಿಂದ ಸಂಜೆ ಮನೆಗೆ ಬರುತ್ತಿದ್ದ ವಿದ್ಯಾರ್ಥಿನಿ ಸೌಜನ್ಯ ನಾಪತ್ತೆಯಾಗಿದ್ದಳು. ಮರುದಿನ ರಾತ್ರಿ ಮಣ್ಣಸಂಕ ಹತ್ತಿರ ಆಕೆ ಮೃತದೇಹ ಪತ್ತೆಯಾಗಿತ್ತು.

ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ದಾಖಲಾಗಿತ್ತು. ಈ ಸಂಬಂಧ ಶಂಕಿತ ಆರೋಪಿ ಕಾರ್ಕಳ ತಾಲೂಕಿನ ಕುಕ್ಕುಂದೂರು ಗ್ರಾಮದ ಸಂತೋಷ್ ರಾವ್ ಎಂಬಾತನನ್ನು ಸಾರ್ವಜನಿಕರು ಬಾಹುಬಲಿ ಬೆಟ್ಟದ ಹತ್ತಿರ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದರು. ಈ ಕುರಿತು ಸಾಕಷ್ಟು ತನಿಖೆ ನಡೆಯಿತು. ಮುಂದೆ ಸಿಬಿಐಗೆ ಪ್ರಕರಣವನ್ನು ಒಪ್ಪಿಸಲಾಗಿತ್ತು. ಈಗ ಸಿಬಿಐ ಕೋರ್ಟ್ ಆರೋಪಿಯನ್ನು ಖುಲಾಸೆಗೊಳಿಸಿದೆ.




error: Content is protected !!