ವಾಲ್ಮೀಕಿ ನಿಗಮದ ಮಾಜಿ ಎಂಡಿ ಹಾಗೂ ಲೆಕ್ಕಾಧಿಕಾರಿ ಬಂಧನ

93

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: 90ಕೋಟಿಗೆ ಹೆಚ್ಚು ಹಣವನ್ನು ಅಕ್ರಮವಾಗಿ ವರ್ಗಾವಣೆ ಮಾಡಿದ ಪ್ರಕರಣ ಸಂಬಂಧ ವಾಲ್ಮೀಕಿ ಅಭಿವೃದ್ಧಿ ನಿಗಮದ ಮಾಜಿ ಎಂಡಿ ಜೆ.ಜಿ ಪದ್ಮನಾಭ್ ಹಾಗೂ ಲೆಕ್ಕಾಧಿಕಾರಿ ಪರಶುರಾಮ್ ಜಿ.ದುರುಗಣ್ಣವರ್ ಅವರನ್ನು ಶನಿವಾರ ಎಸ್ಐಟಿ ಅಧಿಕಾರಿಗಳು ಬಂಧಿಸಿದ್ದಾರೆ.

ನಿಗಮದ ಅಧೀಕ್ಷಕ ಪಿ.ಚಂದ್ರಶೇಖರನ್ ಬ್ಯಾಂಕ್ ಅಧಿಕಾರಿಗಳು ಹಾಗೂ ಬಂಧಿತರಿಬ್ಬರು ಒತ್ತಡ ಹೇರಿ ಅಕ್ರಮವಾಗಿ ಹಣ ವರ್ಗಾವಣೆ ಮಾಡಿಸಿದ್ದಾರೆ ಪತ್ರ ಬರೆದುಕೊಂಡು ಮೇ 26ರಂದು ಶಿವಮೊಗ್ಗದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಸಂಬಂಧ ಸರ್ಕಾರ ಶುಕ್ರವಾರ ಎಸ್ಐಟಿ ರಚಿಸಿದೆ.

ವಾಲ್ಮೀಕಿ ಅಭಿವೃದ್ಧಿ ನಿಗಮದ ಖಾತೆಯಲ್ಲಿದ್ದ 90 ಕೋಟಿ ಹೆಚ್ಚು ಹಣವನ್ನು ಅಕ್ರಮವಾಗಿ ಹೈದ್ರಾಬಾದ್ ನ ಬಂಜಾರಾ ಹಿಲ್ಸ್ ಆರ್ ಬಿಎಲ್ ಬ್ಯಾಂಕ್ ನಲ್ಲಿರುವ ಖಾತೆಗಳಿಗೆ ವರ್ಗಾವಣೆ ಮಾಡಲಾಗಿರುವ ಹಗರಣ ಸಂಬಂಧ ಬಂಧಿಸಲಾಗಿದೆ.




error: Content is protected !!