ಕೊಲೆ ಕೇಸ್: ನಟ ದರ್ಶನ್ ಅರೆಸ್ಟ್

112

ಪ್ರಜಾಸ್ತ್ರ ಸುದ್ದಿ

ಬೆಂಗಳೂರು/ಮೈಸೂರು: ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಯಾಂಡಲ್ ವುಟ್ ನಟ ದರ್ಶನ್ ಹಾಗೂ ಅವರ ಆಪ್ತ ಗೆಳೆತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಬಿ.ದಯಾನಂದ್ ತಿಳಿಸಿದ್ದಾರೆ.

ಚಿತ್ರುದರ್ಗ ಮೂಲದ ರೇಣುಕಾಸ್ವಾಮಿ ಎಂಬಾತ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲವಾಗಿ ಮೆಸೇಜ್ ಹಾಕಿದ ಸಂಬಂಧ ಆತನ ಮೇಲೆ ಹಲ್ಲೆ ಮಾಡಲಾಗಿದೆಯಂತೆ. ನಂತರ ಆತ ಮೃತಪಟ್ಟಿದ್ದು, ಸುಮನಹಳ್ಳಿ ಬ್ರಿಡ್ಜ್ ಹತ್ತಿರ ಈ ಘಟನೆ ನಡೆದಿದೆಯಂತೆ.

ಜೂನ್ 8ರಂದು ಈ ಘಟನೆ ನಡೆದಿದೆ. ಆರೋಪಿಗಳನ್ನು ಬಂಧಿಸಿದ್ದಾರೆ. ಪೊಲೀಸರ ವಿಚಾರಣೆ ವೇಳೆ ನಟ ದರ್ಶನ್ ಹೆಸರು ಬಾಯಿ ಬಿಟ್ಟಿದ್ದಾರೆ. ಹೀಗಾಗಿ ನಟ ದರ್ಶನರನ್ನು ಮೈಸೂರಿನಲ್ಲಿ ಬಂಧಿಸಲಾಗಿದೆ. ದರ್ಶನ್ ಆಪ್ತ ಗೆಳತಿ ಪವಿತ್ರಗೌಡಳನ್ನು ಬೆಂಗಳೂರಿನಲ್ಲಿ ವಶಕ್ಕೆ ಪಡೆಯಲಾಗಿದೆ.




error: Content is protected !!