4ನೇ ಬಾರಿಗೆ ಸಿಎಂ ಆದ ಚಂದ್ರಬಾಬು ನಾಯ್ಡು

77

ಪ್ರಜಾಸ್ತ್ರ ಸುದ್ದಿ

ಅಮರಾವತಿ: 4ನೇ ಬಾರಿಗೆ ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗಿ ಚಂದ್ರಬಾಬು ನಾಯ್ಡು ಇಂದು ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ಎಸ್.ಅಬ್ದುಲ್ ನಜೀರ್ ಅವರು ಪ್ರಮಾಣ ವಚನ ಬೋಧಿಸಿದರು.

ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವರಾದ ಅಮಿತ್ ಶಾ, ಜೆ.ಪಿ ನಡ್ಡಾ, ಬಂಡಿ ಸಂಜಯ್ ಕುಮಾರ್, ತೆಲಂಗಾಣ ಮಾಜಿ ರಾಜ್ಯಪಾಲ ತಮಿಳಿಸಾಯಿ ಸುಂದರಾಜನ್ ಸೇರಿ ಅನೇಕ ಗಣ್ಯರು ಭಾಗವಹಿಸಿದ್ದರು.

ಇದೇ ವೇಳೆ ಜನಸೇನಾ ಪಕ್ಷದ ನಾಯಕ, ನಟ ಪವನ್ ಕಲ್ಯಾಣ್, ಚಂದ್ರಬಾಬು ನಾಯ್ಡು ಪುತ್ರ ನಾರಾ ಲೋಕೇಶ್ ಸೇರಿ 22 ಜನರು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಪವನ್ ಕಲ್ಯಾಣ್ ಡಿಸಿಎಂ ಸ್ಥಾನದ ಜೊತೆಗೆ 2 ಸಂಪುಟ ದರ್ಜೆಯ ಸಚಿವ ಸ್ಥಾನ, ಬಿಜೆಪಿ ಸಹ 1 ಸಚಿವ ಸ್ಥಾನ ಕೇಳಿದೆ ಎಂದು ತಿಳಿದು ಬಂದಿದೆ.




error: Content is protected !!