ಪ್ರಜಾಸ್ತ್ರ ಸುದ್ದಿ
ಬೆಳಗಾವಿ: ವಿಚಾರಣಾಧೀನ ಕೈದಿ ಬೆಳಗಾವಿ ಕೋರ್ಟ್ ನಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಘಟನೆ ಬುಧವಾರ ನಡೆದಿದೆ. ಈ ವೇಳೆ ಸಾರ್ವಜನಿಕರು, ವಕೀಲರು ಆತನನ್ನು ಥಳಿಸಿದ್ದಾರೆ.
ಹಲವು ಪ್ರಕರಣಗಳಲ್ಲಿ ಭಾಗಿಯಾಗಿರುವ ವಿಚಾರಣಾಧೀನ ಕೈದಿ ಜಯೇಶ್ ಪೂಜಾರಿ ಹಿಂಡಲಗಾ ಕೇಂದ್ರ ಕಾರಾಗೃಹದಲ್ಲಿದ್ದ. ವಿಚಾರಣೆಗಾಗಿ ಇಂದು ಕೋರ್ಟಿಗೆ ಕರೆದುಕೊಂಡು ಬರಲಾಗಿತ್ತು. ನನ್ನ ಅಹವಾಲನ್ನು ಕೋರ್ಟ್ ನಲ್ಲಿ ಕೇಳುತ್ತಿಲ್ಲವೆಂದು ಹೇಳಿ ಪಾಕ್ ಪರ ಘೋಷಣೆ ಕೂಗಿದ್ದಾನೆ.
ಸಾರ್ವಜನಿಕರಿಂದ ಜಯೇಶ್ ಪೂಜಾರಿಯನ್ನು ಪೊಲೀಸರು ರಕ್ಷಿಸಿ ಎಪಿಎಂಸಿ ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗಿದ್ದಾರೆ. ಈ ಹಿಂದೆ ಹಿರಿಯ ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ ಹಾಗೂ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಕೊಲೆ ಬೆದರಿಕೆ ಹಾಕಿದ್ದ.