ನಟ ದರ್ಶನ್ ವಿರುದ್ಧ ಚಿತ್ರದುರ್ಗದಲ್ಲಿ ಪ್ರತಿಭಟನೆ

83

ಪ್ರಜಾಸ್ತ್ರ ಸುದ್ದಿ

ಚಿತ್ರದುರ್ಗ: ರೇಣುಕಾಸ್ವಾಮಿ ಕೊಲೆ ಖಂಡಿಸಿ ಚಿತ್ರದುರ್ಗದಲ್ಲಿ ಬುಧವಾರ ಪ್ರತಿಭಟನೆ ನಡೆಸಲಾಗಿದೆ. ಜಂಗಮ ಸಮುದಾಯ, ವೀರಶೈವ ಲಿಂಗಾಯತ ಸಮುದಾಯ ಸೇರಿದಂತೆ ವಿವಿಧ ಸಮುದಾಯಗಳ ನೇತೃತ್ವದಲ್ಲಿ ನಟ ದರ್ಶನ್ ವಿರುದ್ಧ ಪ್ರತಿಭಟನೆ ನಡೆಸಿ ಧಿಕ್ಕಾರ ಕೂಗಿದರು.

ರೇಣುಕಾಸ್ವಾಮಿ ತಪ್ಪು ಮಾಡಿದ್ದರೆ ಕಾನೂನು ಪ್ರಕಾರ ಶಿಕ್ಷೆ ಕೊಡಿಸಲು ಅವಕಾಶವಿತ್ತು. ಆದರೆ, ಚಿತ್ರಹಿಂಸೆ ಕೊಟ್ಟು ಕೊಲೆ ಮಾಡಲಾಗಿದೆ. ತಪ್ಪು ಮಾಡಿದವರಿಗೆ ಶಿಕ್ಷೆಯಾಗಬೇಕು. ನಟ ದರ್ಶನ್ ಚಿತ್ರಗಳು ಬಿಡುಗಡೆಯಾಗಬಾರದು. ಅವರಿಗೆ ಕಠಿಣ ಕಾನೂನು ಶಿಕ್ಷೆಯಾಗಬೇಕು ಎಂದು ಆಗ್ರಹಿಸಿದ್ದರು.




error: Content is protected !!