‘ಅಗತ್ಯ ಬಿದ್ದರೆ ಯಡಿಯೂರಪ್ಪ ಬಂಧನ’

85

ಪ್ರಜಾಸ್ತ್ರ ಸುದ್ದಿ

ತುಮಕೂರು: ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮಾಜಿ ಸಿಎಂ ಯಡಿಯೂರಪ್ಪ ಬಂಧನಕ್ಕೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳು ನಿರ್ಧಾರ ತೆಗೆದುಕೊಳ್ಳುತ್ತಾರೆ. ಅಗತ್ಯ ಬಿದ್ದರೆ ಬಂಧಿಸುತ್ತಾರೆ. ಅಗತ್ಯವಿದೆ ಅಂತಾ ನಾನು ಹೇಳಲು ಆಗುವುದಿಲ್ಲವೆಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ.

ಜೂನ್ 15ರೊಳಗೆ ಪೊಲೀಸರು ಚಾರ್ಜ್ ಶೀಟ್ ಸಲ್ಲಿಸಬೇಕಿದೆ. ಸ್ವಾಭಾವಿಕವಾಗಿ ಯಡಿಯೂರಪ್ಪನವರು ಬಂಧಿಸದಂತೆ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ. ಹೀಗಾಗಿ ಜೂನ್ 15ರೊಳಗೆ ಎಲ್ಲ ಪ್ರಕ್ರಿಯೆಗಳನ್ನು ಪೊಲೀಸರು ಮುಗಿಸುತ್ತಾರೆ ಅಂತಾ ಗುರುವಾರ ಮಾಧ್ಯಮಗಳಿಗೆ ತಿಳಿಸಿದರು.




error: Content is protected !!