ಪ್ರಜಾಸ್ತ್ರ ಸುದ್ದಿ
ಚೆನ್ನೈ: ತಮಿಳುನಾಡಿನ ಕಲ್ಲಕುರಿಚಿ ಜಿಲ್ಲೆಯಲ್ಲಿ ನಕಲಿ ಮದ್ಯ ಸೇವನೆಯಿಂದ ಮೃತಪಟ್ಟವರ ಸಂಖ್ಯೆಯ 37ಕ್ಕೆ ಏರಿಕೆಯಾಗಿದೆ. ಬುಧವಾರ ಈ ಘಟನೆ ನಡೆದಿದ್ದು, ಮೃತರ ಸಂಖ್ಯೆ ಏರುತ್ತಲೇ ಇದೆ.
ಈ ಭಾಗದಲ್ಲಿ ನಕಲಿ ಮದ್ಯ ಮಾರಾಟ ಹಾವಳಿ ಜೋರಾಗಿದ್ದು, ಪೊಲೀಸರು ಕ್ರಮ ಕೈಗೊಳ್ಳದ ಪರಿಣಾಮ ಇಷ್ಟೊಂದು ಅನಾಹುತ ನಡೆದಿದೆ ಎಂದು ಸಾರ್ವಜನಿಕರು ವಾಗ್ದಾಳಿ ನಡೆಸಿದ್ದಾರೆ. ಮೃತರಲ್ಲಿ ಕೂಲಿ ಕಾರ್ಮಿಕರೇ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಪ್ರಕರಣ ಸಂಬಂಧ ಮೂವರನ್ನು ಬಂಧಿಸಲಾಗಿದೆ.
ಕೆಲ ಮೂಲಗಳ ಪ್ರಕಾರ ಕಲ್ಲಕುರಿಚಿ ಸರ್ಕಾರಿ ಆಸ್ಪತ್ರೆಗೆ 107 ಜನರನ್ನು ದಾಖಲಿಸಲಾಗಿದೆ. ಇದರಲ್ಲಿನ 59 ಜನರನ್ನು ಪುದುಚೇರಿ, ವಿಲ್ಲುಪುರಂ, ಸೇಲಂ ಸೇರಿ ಇತರೆ ಆಸ್ಪತ್ರೆಗೆ ಸ್ಥಳಾಂತರಿಸಲು ತಿಳಿಸಲಾಗಿದೆ ಎಂದು ಹೇಳಲಾಗುತ್ತಿದೆ. ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಪ್ರಕರಣವನ್ನು ಸಿಬಿಸಿಐಡಿಗೆ ನೀಡಿ ಆದೇಶಿಸಿದ್ದಾರೆ.