ದರ್ಶನ್ ಸೇರಿ ನಾಲ್ವರಿಗೆ 12 ದಿನ ನ್ಯಾಯಾಂಗ ಬಂಧನ

71

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಎಂಬಾತನ ಕೊಲೆ ಪ್ರಕರಣ ಸಂಬಂಧ ನಟ ದರ್ಶನ್ ಸೇರಿ 4 ಆರೋಪಿಗಳನ್ನು 24ನೇ ಎಸಿಎಂಎಂ ಕೋರ್ಟ್ 12 ದಿನಗಳ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶಿಸಿದೆ. ಇದರೊಂದಿಗೆ 12 ದಿನಗಳ ಪೊಲೀಸ್ ಕಸ್ಟಡಿ ಅವಧಿ ಅಂತ್ಯವಾಗಿದೆ.

ಎ2 ಆರೋಪಿ ದರ್ಶನ್, ಎ9 ಆರೋಪಿ ಧನರಾಜ್, ಎ10 ಆರೋಪಿ ವಿನಯ್ ಹಾಗೂ ಎ14 ಆರೋಪಿ ಪ್ರದೋಷ್ ಇವರನ್ನು ಪರಪ್ಪನರ ಅಗ್ರಹಾರ ಜೈಲಿಗೆ ಪೊಲೀಸರು ಸ್ಥಳಾಂತರಿಸಿದ್ದಾರೆ. ಇಂದು ಪೊಲೀಸ್ ಕಸ್ಟಡಿ ಅವಧಿ ಮುಗಿದ ಹಿನ್ನಲೆಯಲ್ಲಿ ಕೋರ್ಟ್ ಮುಂದೆ ಹಾಜರು ಪಡಿಸಲಾಯಿತು.

ನ್ಯಾಯಾಧೀಶ ವಿಜಯಕುಮಾರ್ ಎಸ್ ಜಾಟ್ಲಾ ಅವರಿದ್ದ ಪೀಠ ಜುಲೈ 4ರ ತನಕ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ದರ್ಶನ್ ಪರ ವಕೀಲರು ಜಾಮೀನಿಗೆ ಸಂಬಂಧಿಸಿದಂತೆ ಇನ್ನು ಮುಂದೆ ಅರ್ಜಿ ಸಲ್ಲಿಸುವ ಸಾಧ್ಯತೆಗಳಿವೆ. ಎ1 ಆರೋಪಿ ಪವಿತ್ರಾಗೌಡ ಸೇರಿ 10 ಆರೋಪಿಗಳನ್ನು ಗುರುವಾರವೇ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ.




error: Content is protected !!