ಹಲಸಂಗಿ ಗೆಳೆಯರಿಂದ 800 ತ್ರಿಪದಿ ಗರತಿಹಾಡು ಸಂಗ್ರಹ

87

ಪ್ರಜಾಸ್ತ್ರ ಸಾಹಿತ್ಯ ಮತ್ತು ರಂಗಭೂಮಿ

ಇಂಡಿ: ಹಲಸಂಗಿ ಗೆಳೆಯರ ಪ್ರತಿಷ್ಠಾನದ ವತಿಯಿಂದ ತಾಲೂಕಿನ ಝಳಕಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜ್‌ನಲ್ಲಿ ಶನಿವಾರ ವಿಶೇಷ ಉಪನ್ಯಾಸ ಕಾರ್ಯಕ್ರಮ ನಡೆಯಿತು.

ಸಿಕ್ಯಾಬ್ ಮಹಿಳಾ ಪದವಿ ಮಹಾವಿದ್ಯಾಲಯದ ಕನ್ನಡ ವಿಭಾಗದ ಮುಖ್ಯಸ್ಥರಾದ ಡಾ.ಮಲ್ಲಿಕಾರ್ಜುನ ಮೇತ್ರಿ, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಉಪನ್ಯಾಸಕ ಡಾ.ರಮೇಶ ತೇಲಿ ಅವರು ಉಪನ್ಯಾಸ ನೀಡಿ, ಹಲಸಂಗಿ ಗೆಳೆಯರು 800 ತ್ರಿಪದಿ ಗರತಿಹಾಡು ಸಂಗ್ರಹಿಸಿ ಅಚ್ಚರಿ ಮೂಡಿಸಿದ್ದಾರೆ. ತಂದೆ ತಾಯಿಯ ಪ್ರೀತಿ ಹಾಗೂ ದಾಂಪತ್ಯ ಜೀವನದ ಮೌಲ್ಯ ಕುರಿತು ಹಾಗೂ ಹಲಸಂಗಿ ಗೆಳೆಯರು ಸ್ವಾತಂತ್ರ್ಯ ಹೋರಾಟದಲ್ಲಿ ಸಾಹಿತ್ಯದ ಮೂಲಕ ನೀಡಿದ ಕೊಡುಗೆಗಳು, ಮಧುರ ಚೆನ್ನರ ಜೀವನ ಹಾಗೂ ಮಾತಾ ಅರವಿಂದರ ದಾರಿಯ ಬಗ್ಗೆ ಸುದೀರ್ಘವಾಗಿ ತಿಳಿಸಿಕೊಟ್ಟರು. ಪ್ರೊ.ಡಿ.ಭಿ ಭಜಂತ್ರಿ ಮಾತನಾಡಿದರು.

ಕಾಲೇಜಿನ ಪ್ರಾಚಾರ್ಯ ಪ್ರೊ: ವಲ್ಲಭ ಕಬಾಡೆ ಅಧ್ಯಕ್ಷತೆ ವಹಿಸಿದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ, ಹಲಸಂಗಿ ಪ್ರತಿಷ್ಠಾನದ ಸದಸ್ಯ ಕಾರ್ಯದರ್ಶಿ ಸಂತೋಷ ಭೋವಿ ಸ್ವಾಗತಿಸಿದರು. ಕಾರ್ಯಕ್ರಮದಲ್ಲಿ ಆರ್.ಎನ್ ಶಿಂಪಿ, ಜೆ.ಎಸ್ ಗಲಗಲಿ, ಚಿದಾನಂದ ಗಲಗಲಿ ಇತರರು ಉಪಸ್ಥಿತರಿದ್ದರು.

ವಿರೇಶ ವಾಲಿ ಹಾಗೂ ತಂಡದವರು ಜಾನಪದ ಸಂಗೀತ ಕಾರ್ಯಕ್ರಮ ಪ್ರಸ್ತುತಪಡಿಸಿದರು. ರವಿಕುಮಾರ ಅರಳಿ ನಿರೂಪಿಸಿದರು. ಪ್ರೊ.ಸಂಗಮೇಶ ಹಿರೇಮಠ ವಂದಿಸಿದರು.




error: Content is protected !!