ಪ್ರಜಾಸ್ತ್ರ ಸುದ್ದಿ
ನವದೆಹಲಿ: ಲೋಕಸಭಾ ಚುನಾವಣೆಯ ಫಲಿತಾಂಶಕ್ಕೆ ಸಂಬಂಧಿಸಿದಂತೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಮಾತನಾಡಿದ್ದು, ಇದು ಪ್ರಜಾಪ್ರಭುತ್ವದ ಗೆಲುವು. ಮೋದಿಗೆ ನೈತಿಕ ಸೋಲಾಗಿದೆ ಎಂದಿದ್ದಾರೆ.
ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ಅವರು, ಜನಾದೇಶ ಮೋದಿ ವಿರುದ್ಧವಾಗಿದೆ. ಯಾವುದೇ ಪಕ್ಷಕ್ಕೆ ಸ್ಪಷ್ಟ ಬಹುಮತ ನೀಡಿಲ್ಲ. ಇದು ಜನರ ಹಾಗೂ ಪ್ರಜಾತಂತ್ರದ ಗೆಲುವಾಗಿದೆ ಅಂತಾ ಹೇಳಿದ್ದಾರೆ.
ಸಂಜೆ 6 ಗಂಟೆಯವರೆಗೆ ಚುನಾವಣಾ ಆಯೋಗದ ಪ್ರಕಾರ ಎನ್ ಡಿಎ 290, ಇಂಡಿಯಾ ಮೈತ್ರಿಕೂಟ 236 ಹಾಗೂ ಇತರರು 17 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ. ಸರ್ಕಾರ ರಚನೆಗೆ 272 ಮ್ಯಾಜಿಕ್ ನಂಬರ್ ಆಗಿದೆ.