ಬೆಳಗಾವಿ, ಖಾನಪುರ ಬಂದ್ ಗೆ ಕರೆ

223

ಪ್ರಜಾಸ್ತ್ರ ಸುದ್ದಿ

ಬೆಳಗಾವಿ: ಅಗ್ನಿಪಥ್ ಯೋಜನೆ ಖಂಡಿಸಿ ಈಗಾಗ್ಲೇ ಎಲ್ಲೆಡೆ ಪ್ರತಿಭಟನೆಗಳು ನಡೆಯುತ್ತಿವೆ. ಇದು ಕರ್ನಾಟಕಕ್ಕೂ ಕಾಲಿಟ್ಟಿದ್ದು, ಬೆಳಗಾವಿ, ಹುಬ್ಬಳ್ಳಿ-ಧಾರವಾಡದಲ್ಲಿ ಪ್ರತಿಭಟನೆ ಜೋರಾಗಿದೆ. ಇದಕ್ಕೆ ಕಾಂಗ್ರೆಸ್ ಶಾಸಕಿ ಅಂಜಲಿ ನಿಂಬಾಳ್ಕರ್ ಸಾಥ್ ಕೊಟ್ಟಿದ್ದಾರೆ.

ಈ ಬಗ್ಗೆ ಮಾತನಾಡಿರುವ ಶಾಸಕಿ ನಿಂಬಾಳ್ಕರ್, ಜೂನ್ 20ರಂದು ಬೆಳಗಾವಿ, ಖಾನಪುರ್ ಸಂಪೂರ್ಣ ಬಂದ್ ಗೆ ಕರೆ ನೀಡಲಿದ್ದೇವೆ ಎಂದಿದ್ದಾರೆ. ಈ ಮೂಲಕ ಕರ್ನಾಟಕದಲ್ಲಿಯೂ ಅಗ್ನೀರ್ ಅರೆಕಾಲಿಕ ಸೇನಾ ವೃತ್ತಿಗೆ ವಿರೋಧ ವ್ಯಕ್ತವಾಗಿದೆ.




error: Content is protected !!