ಪ್ರಜಾಸ್ತ್ರ ಸುದ್ದಿ
ನವದೆಹಲಿ: ನನ್ನ ಬಂಧನ ಬಳಿಕ ದೆಹಲಿ ಹಾಗೂ ಪಂಜಾಬಿನ ಆಪ್ ಸರ್ಕಾರ ಬೀಳಿಸಲು ಬಿಜೆಪಿ ನೋಡಿತು. ಅದು ಸಾಧ್ಯವಾಗಲಿಲ್ಲ. ನನ್ನ ಬಂಧನ ಬಳಿಕ ಆಪ್ ಪಕ್ಷ ಮತ್ತಷ್ಟು ಗಟ್ಟಿಯಾಗಿದೆ ಎಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.
ಆಪ್ ಶಾಸಕರನ್ನು ಉದ್ದೇಶಿಸಿ ಅವರು ಮಾತನಾಡುವ ಸಂದರ್ಭದಲ್ಲಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. ದೆಹಲಿ, ಪಂಜಾಬ್ ಸರ್ಕಾರ ಉರುಳಿಸುತ್ತೇವೆ ಎಂದು ಬಿಜೆಪಿಯವರು ಹೇಳುತ್ತಿದ್ದರು. ಆದರೆ, ಅದು ಫಲಿಸಲಿಲ್ಲ ಎಂದಿದ್ದಾರೆ. ಸುಪ್ರೀಂ ಕೋರ್ಟ್ ಕೇಜ್ರಿವಾಲ್ ಅವರಿಗೆ ಮಧ್ಯಂತರ ಜಾಮೀನು ನೀಡಿದೆ.