ಕೊಪ್ಪಳ: ಬಸ್-ಟ್ರ್ಯಾಕ್ಟರ್ ಡಿಕ್ಕಿ, ನಾಲ್ವರ ಸಾವು

93

ಪ್ರಜಾಸ್ತ್ರ ಸುದ್ದಿ

ಕೊಪ್ಪಳ: ಟ್ರ್ಯಾಕ್ಟರ್ ಹಾಗೂ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿ ನಾಲ್ವರು ಮೃತಪಟ್ಟ ಘಟನೆ ತಾಲೂಕಿನ ಹೊಸಳ್ಳಿ ಗ್ರಾಮದ ಹತ್ತಿರ ಶುಕ್ರವಾರ ತಡರಾತ್ರಿ ನಡೆದಿದೆ. ಹುಲಿಗೆಮ್ಮದೇವಿ ದರ್ಶನ ಪಡೆದು ವಾಪಸ್ ಆಗುತ್ತಿದ್ದಾಗ ಈ ಘಟನೆ ನಡೆದಿದೆ.

ಯಲಬುರ್ಗಾ ತಾಲೂಕಿನ ಕರಮುಡಿ ಗ್ರಾಮದ ಬಸವರಾಜ(22), ಮುತ್ತಪ್ಪ(22), ಗದಗ ಜಿಲ್ಲೆಯ ತಿಮ್ಮಾಪುರ ಗ್ರಾಮದ ದುರುಗಮ್ಮ(65), ಕೊಂಡಪ್ಪ(60) ಮೃತ ದುರ್ದೈವಿಗಳು. ಶಿವಪ್ಪ ಹೊಸಮನಿ ಎಂಬುವರು ಸಂಬಂಧಿಕರನ್ನು ಕರೆದುಕೊಂಡು ಹುಲಿಗೆಮ್ಮದೇವಿ ದರ್ಶನಕ್ಕೆ ಹೋಗಿದ್ದರು.

ಅಪಘಾತದ ತೀವ್ರಕ್ಕೆ ಟ್ರ್ಯಾಕ್ಟರ್ ಪಲ್ಟಿಯಾಗಿದೆ. ಹಲವರು ಗಾಯಗೊಂಡಿದ್ದಾರೆ. ಇವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಮುನಿರಾಬಾದ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪಘಾತ ನಡೆದಿದೆ.




Leave a Reply

Your email address will not be published. Required fields are marked *

error: Content is protected !!