ಕಾರು ಅಪಘಾತದಲ್ಲಿ ನಾಲ್ವರ ಸಾವು

275

ಪ್ರಜಾಸ್ತ್ರ ಸುದ್ದಿ

ಹಾಸನ: ನಿಂತಿದ್ದ ಕಂಟೈನರ್ ಗೆ ಕಾರು ಡಿಕ್ಕಿಯಾದ ಪರಿಣಾಮ ನಾಲ್ವರು ಸಾವನ್ನಪ್ಪಿದ್ದಾರೆ. ಚನ್ನರಾಯಪಟ್ಟಣದ ಹತ್ತಿರ ಈ ಘಟನೆ ನಡೆದಿದ್ದು ಬೆಂಗಳೂರು ಮೂಲದ ನಾಲ್ವರು ಯುವಕರು ಮೃತಪಟ್ಟಿದ್ದಾರೆ.

ಚೇತನ, ಮಂಜುನಾಥ, ವಿಕ್ರಂ ಹಾಗೂ ಅಭಿಷೇಕ ಮೃತ ಯುವಕರು ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಚನ್ನರಾಯಪಟ್ಟಣ ನಗರ ಠಾಣೆ ಪೊಲೀಸರು ಭೇಟಿ ನೀಡಿ, ಮರಣೋತ್ತರ ಪರೀಕ್ಷೆಗೆ ಮೃತದೇಹಗಳನ್ನ ಆಸ್ಪತ್ರೆಗೆ ಸಾಗಿಸಲಾಗಿದೆ.




Leave a Reply

Your email address will not be published. Required fields are marked *

error: Content is protected !!