ಪ್ರಜಾಸ್ತ್ರ ಸುದ್ದಿ
ಬೆಳಗಾವಿ: ರಾಜ್ಯ ರಾಜಕೀಯದಲ್ಲಿ ಸಧ್ಯ ತೀವ್ರ ಚರ್ಚೆಯಲ್ಲಿರುವುದು ಸಿಎಂ ಹಾಗೂ ಡಿಸಿಎಂ ಸ್ಥಾನಗಳ ವಿಚಾರ. ಸಚಿವ ಸಂಪುಟದ ಸಹದ್ಯೋಗಿಗಳ ಜೊತೆಗೆ ಕೆಲ ಸ್ವಾಮೀಜಿಗಳು ಸಹ ಜಾತಿ ಪ್ರೇಮ ತೋರಿಸುತ್ತಾ ತಮ್ಮವರಿಗೆ ಸಿಎಂ ಸ್ಥಾನ ಕೊಡಿ ಎಂತಿದ್ದಾರೆ. ಈ ಬಗ್ಗೆ ಕಾಂಗ್ರೆಸ್ ಹಿರಿಯ ನಾಯಕ, ಕರ್ನಾಟಕ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಆರ್.ವಿ ದೇಶಪಾಂಡೆ ವಾಗ್ದಾಳಿ ನಡೆಸಿದ್ದಾರೆ.
ಸಿಎಂ ಹಾಗೂ ಡಿಸಿಎಂಗಳ ಕುರಿತು ಬಹಿರಂಗವಾಗಿ ಹೇಳಿಕೆ ನೀಡುವವರ ಮೇಲೆ ಹೈಕಮಾಂಡ್ ಶಿಸ್ತುಕ್ರಮ ಕೈಗೊಳ್ಳಬೇಕು ಎಂದಿದ್ದಾರೆ. ಯಾವುದೇ ಸ್ಥಾನಗಳ ವಿಚಾರಗಳ ಬಗ್ಗೆ ನಾಲ್ಕು ಗೋಡೆಗಳ ನಡುವೆ ಚರ್ಚೆಯಾಗಬೇಕು. ಹುದ್ದೆಗಳನ್ನು ಸಾರ್ವಜನಿಕ ಸ್ಥಳದಲ್ಲೋ, ಮಾರುಕಟ್ಟೆಯಲ್ಲೋ ಸೃಷ್ಟಿಸಲು ಆಗುವುದಿಲ್ಲವೆಂದು ಕಿಡಿ ಕಾರಿದ್ದಾರೆ.