ಕೆರೆಯಲ್ಲಿ ಮುಳುಗಿ ಮೃತಪಟ್ಟ ನಾಲ್ವರು ಮಕ್ಕಳ ಕುಟುಂಬಕ್ಕೆ ಪರಿಹಾರ

74

ಪ್ರಜಾಸ್ತ್ರ ಸುದ್ದಿ

ಹಾಸನ: ಕಳೆದ ಮೇ 16ರಂದು ಜಿಲ್ಲೆಯ ಆಲೂರು ತಾಲೂಕಿನ ಮುತ್ತಿಗೆ ಗ್ರಾಮದಲ್ಲಿ ಮೃತಪಟ್ಟ ನಾಲ್ವರು ಮಕ್ಕಳ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಸಚಿವರು ಪರಿಹಾರದ ಚೆಕ್ ವಿತರಿಸಿದರು.

ಗೃಹ ಸಚಿವ ಜಿ.ಪರಮೇಶ್ವರ್, ಉಸ್ತುವಾರಿ ಸಚಿವ ಜಿಲ್ಲಾ ಉಸ್ತುವಾರಿ ಸಚಿವ ಕೆ.ರಾಜಣ್ಣ, ಶಾಸಕರಾದ ಕೆ.ಎಂ ಶಿವರಾಮೇಗೌಡ, ಸಿಮೆಂಟ್ ಮಂಜು, ಜಿಲ್ಲಾಧಿಕಾರಿ ಸಿ.ಸತ್ಯಭಾಮ, ಎಸ್ಪಿ ಮೊಹಮ್ಮದ್ ಸುಜೀತಾ ಸೇರಿ ಅನೇಕರಿದ್ದರು.

ಈ ವೇಳೆ ಮಾತನಾಡಿದ ಗೃಹ ಸಚಿವ ಜಿ.ಪರಮೇಶ್ವರ್, ಮೃತಪಟ್ಟ ಮಕ್ಕಳ ಕುಟುಂಬಕ್ಕೆ ತಲಾ 2 ಲಕ್ಷ ರೂಪಾಯಿ ಪರಿಹಾರ ನೀಡಲಾಗಿದೆ. ಇದು ಶಾಶ್ವತ ಪರಿಹಾರವಲ್ಲ. ಕುಟುಂಬಕ್ಕಾದ ನಷ್ಟವನ್ನು ತುಂಬಲು ಸಾಧ್ಯವಿಲ್ಲ. ಸಣ್ಣದೊಂದು ಪರಿಹಾರ. ಚುನಾವಣೆ ನೀತಿ ಸಂಹಿತೆಯಿಂದಾಗಿ ಪರಿಹಾರ ತಡವಾಯ್ತು. ಅನ್ಯತಾ ಭಾವಿಸಬಾರದು ಎಂದರು.




Leave a Reply

Your email address will not be published. Required fields are marked *

error: Content is protected !!