ಉಪ ಚುನಾವಣೆಯಲ್ಲಿ ಡಿ.ಕೆ ಶಿವಕುಮಾರ್ ಸ್ಪರ್ಧಿಸಲ್ಲ: ಜಿ.ಟಿ ದೇವೇಗೌಡ

79

ಪ್ರಜಾಸ್ತ್ರ ಸುದ್ದಿ

ಮೈಸೂರು: ಚನ್ನಪಟ್ಟಣ ವಿಧಾನಸಭೆಯ ಉಪ ಚುನಾವಣೆಯಲ್ಲಿ ಡಿ.ಕೆ ಶಿವಕುಮಾರ್ ಸ್ಪರ್ಧಿಸಲ್ಲ. ರಾಜಕೀಯ ತಂತ್ರಗಾರಿಕೆ ಮಾಡುತ್ತಿದ್ದಾರೆ ಎಂದು ಜೆಡಿಎಸ್ ಶಾಸಕ ಜಿ.ಟಿ ದೇವೇಗೌಡ ಹೇಳಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಡಿ.ಕೆ ಸುರೇಶನನ್ನು ಸ್ಪರ್ಧಗೆ ಇಳಿಸುವ ದೃಷ್ಟಿಯಿಂದ ನಾನು ಬಂದರೆ ಮತ ಹಾಕುತ್ತೀರಾ ಎಂದು ಜನರನ್ನು ಕೇಳುತ್ತಿದ್ದಾರೆ. ನನ್ನ ರಾಜಕೀಯ ಅನುಭವದಿಂದ ಹೇಳುವುದಾದರೆ ಡಿ.ಕೆ ಶಿವಕುಮಾರ್ ಸ್ಪರ್ಧಿಸಲ್ಲ.

ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ ಮಾಡುತ್ತೇನೆಂದು ಎಲ್ಲಿಯೂ ಹೇಳಿಲ್ಲ. ಜನಭಿಪ್ರಾಯ ನನ್ನ ಪರವಾಗಿದೆ ಎಂದು ಸಿ.ಪಿ ಯೋಗೇಶ್ವರ್ ಹೇಳುತ್ತಿದ್ದಾರೆ. ಕೋರ್ ಕಮಿಟಿ ಅಧ್ಯಕ್ಷ ನಾನೇ ಆಗಿರುವುದರಿಂದ ವೈಯಕ್ತಿಕವಾಗಿ ಹೇಳಲು ಬರುವುದಿಲ್ಲ. ಸಭೆ ಮಾಡಿ ತೀರ್ಮಾನ ಮಾಡಲಾಗುತ್ತೆ. ಮೈತ್ರಿ ನಾಯಕರೊಂದಿಗೆ ಚರ್ಚೆ ನಡೆಸಲಾಗುತ್ತೆ ಅಂತಾ ಹೇಳಿದರು.




error: Content is protected !!