ನೇಣು ಹಾಕಿಕೊಂಡು ರೈತ ಆತ್ಮಹತ್ಯೆ

322

ಪ್ರಜಾಸ್ತ್ರ ಸುದ್ದಿ

ದೇವರಹಿಪ್ಪರಗಿ: ವಿಜಯಪುರ ಜಿಲ್ಲೆ ದೇವರಹಿಪ್ಪರಗಿ ತಾಲೂಕಿನ ಕೆರೂಟಗಿ ಗ್ರಾಮದ ರೈತ ಸಾಹೇಬಗೌಡ ಹಚಡದ(39) ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಸಾಲದ ಸುಳಿಯಲ್ಲಿ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಕೋರವಾರ ಕೆನರಾ ಬ್ಯಾಂಕ್ ನಲ್ಲಿ 2ಲಕ್ಷ, ತಿಳಗೂಳ ಪಿಕೆಪಿಎಸ್ ನಲ್ಲಿ 50ಸಾವಿರ ಹಾಗೂ ಕೈಸಾಲ ಮಾಡಿಕೊಂಡಿದ್ದನಂತೆ. ಬೆಳೆ ಹಾಳಾಗಿ ಇದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನಂತೆ. ಮೃತನಿಗೆ ಪತ್ನಿ ಹಾಗೂ ಮೂವರು ಗಂಡು ಮಕ್ಕಳಿದ್ದಾರೆ. ಕಲಕೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.




error: Content is protected !!