ತಿಕೋಟಾ: ಹುತಾತ್ಮ ಯೋಧನಿಗೆ ಅಂತಿಮ ಗೌರವ

96

ಪ್ರಜಾಸ್ತ್ರ ಸುದ್ದಿ

ವಿಜಯಪುರ: ಭಾರತೀಯ ಸೇನೆಯಲ್ಲಿ ಹವಾಲ್ದಾರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಜಿಲ್ಲೆಯ ತಿಕೋಟಾ ಪಟ್ಟಣದ ರಾಜು ಕರಜಗಿ ಯೋಧ ಹುತಾತ್ಮರಾಗಿದ್ದಾರೆ. ಇಂದು ಪಾರ್ಥಿವ ಶರೀರ ಪಟ್ಟಣಕ್ಕೆ ತಲುಪಿತು. ಈ ವೇಳೆ ಪಟ್ಟಣದಲ್ಲಿ ಮೆರವಣಿಗೆ ನಡೆಸಲಾಯಿತು.

ಪಟ್ಟಣದ ವಾಡೆ ಮೈದಾನದಲ್ಲಿ ಅಂತಿಮ ನಮನಕ್ಕೆ ಅವಕಾಶ ಕಲ್ಪಿಸಲಾಗಿದ್ದು, ಶಾಲಾ, ಕಾಲೇಜು ವಿದ್ಯಾರ್ಥಿಗಳು, ರಾಜಕೀಯ ನಾಯಕರು, ವಿವಿಧ ಕ್ಷೇತ್ರದ ಗಣ್ಯರು, ಸರ್ಕಾರಿ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ಅಂತಿಮ ದರ್ಶನ ಪಡೆದರು.

ಪಾರ್ಥಿವ ಶರೀರ ಪಟ್ಟಣಕ್ಕೆ ಬರುತ್ತಿದ್ದಂತೆ ಕುಟುಂಬಸ್ಥರ, ಸಂಬಂಧಿಕರ, ಸ್ನೇಹಿತರ ಆಕ್ರಂದನ ಮುಗಿಲು ಮುಟ್ಟಿತು. ಪ್ರಾಥಮಿಕ ಆರೋಗ್ಯ ಕೇಂದ್ರದ ಆವರಣದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತಿಮ ಸಂಸ್ಕಾರ ನಡೆಯಲಿದೆ ಎಂದು ತಿಳಿದು ಬಂದಿದೆ. ರಾಜು ಕರಜಗಿ ಅವರು ಜಮ್ಮು ಕಾಶ್ಮೀರದಲ್ಲಿ ಭಾರತೀಯ ಸೇನೆಯ ಹವಾಲ್ದಾರ್ ಆಗಿ ಸೇವೆ ಸಲ್ಲಿಸುತ್ತಿದ್ದರು.




error: Content is protected !!