96 ತಾಲೂಕುಗಳು ಪ್ರವಾಹ ಪೀಡಿತ: ರಾಜ್ಯ ಸರ್ಕಾರ ಘೋಷಣೆ

435

ಬೆಂಗಳೂರು: ಈ ಬಾರಿ ರಾಜ್ಯದಲ್ಲಿ ಪ್ರವಾಹದ ಎಫೆಕ್ಟ್ ಜನರ ಬದುಕು ಮೂರಾಬಟ್ಟಿ ಮಾಡಿತು. ಮಹಾ ಮಳೆಗೆ ನಲುಗಿದ ಕರ್ನಾಟಕದ 28 ಜಿಲ್ಲೆಯ 96 ತಾಲೂಕುಗಳಲ್ಲಿ ಅತೀವೃಷ್ಟಿಯಾಗಿದೆ ಎಂದು ರಾಜ್ಯ ಸರ್ಕಾರ ಘೋಷಣೆ ಮಾಡಿದೆ.

ಮೊದಲ ಆದೇಶದಲ್ಲಿ 15 ಜಿಲ್ಲೆಗಳ 55 ತಾಲೂಕುಗಳು, ಮತ್ತೊಂದು ಆದೇಶದಲ್ಲಿ 13 ಜಿಲ್ಲೆಯ 41 ತಾಲೂಕುಗಳು ಮುಂದಿನ ಆದೇಶದವರೆಗೂ ಪ್ರವಾಹ ಪೀಡಿತ ಪ್ರದೇಶಗಳೆಂದು ಘೋಷಿಸಲಾಗಿದೆ. ಈ ಮೂಲಕ ರಾಜ್ಯದ ಬಹುತೇಕ ಎಲ್ಲ ಜಿಲ್ಲೆಗಳು ಪ್ರವಾಹದ ಹೊಡೆತಕ್ಕೆ ಸಿಲುಕಿವೆ.

ಬೆಂಗಳೂರು ನಗರ ಜಿಲ್ಲೆಯ ಬೆಂಗಳೂರು ದಕ್ಷಿಣ, ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ಹಾಗೂ ಗುಬ್ಬಿ, ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ಹಾಗೂ ಹೊಸದುರ್ಗ, ದಾವಣಗೆರೆ ಜಿಲ್ಲೆಯ ಚೆನ್ನಗಿರಿ, ದಾವಣಗೆರೆ ಹಾಗೂ ಹೊನ್ನಳ್ಳಿ, ಬಳ್ಳಾರಿ ಜಿಲ್ಲೆಯ ಹಡಗಲಿ, ಹಗರಿಬೊಮ್ಮನಹಳ್ಳಿ, ಹಾಗೂ ಹರಪ್ಪನಹಳ್ಳಿ, ಬೆಳಗಾವಿ ಜಿಲ್ಲೆಯ ಬೈಲಹೊಂಗಲ, ಗೋಕಾಕ, ಖಾನಾಪುರ, ಬಾಗಲಕೋಟೆ ಜಿಲ್ಲೆಯ ಮುಧೋಳ, ಹಾವೇರಿಯ ಬ್ಯಾಡಗಿ, ಹಾವೇರಿ, ಶಿಗ್ಗಾಂವ, ರಾಣೆಬೆನ್ನೂರು, ಹಿರೇಕೆರೂರು ಪ್ರವಾಹಕ್ಕೆ ತುತ್ತಾಗಿವೆ.

ಇನ್ನು ಧಾರವಾಡ ಜಿಲ್ಲೆಯ ಕುಂದಗೋಳ, ಧಾರವಾಡ, ಕಲಘಟಗಿ, ಹುಬ್ಬಳ್ಳಿ, ಶಿವಮೊಗ್ಗ ಜಿಲ್ಲೆಯ ಭದ್ರವಾತಿ, ಹೊಸನಗರ, ಸಾಗರ, ಶಿಕಾರಿಪುರ, ಶಿವಮೊಗ್ಗ ಹಾಗೂ ಸೊರಬ, ಚಿಕ್ಕಮಗಳೂರು ಜಿಲ್ಲೆಯ ಕಡೂರ, ಕೊಪ್ಪ, ಮುಡಿಗೇರಿ, ನರಸಿಂಹರಾಜಪುರ, ಶೃಂಗೇರಿ ಮತ್ತು ತರೀಕೆರೆ, ಕೊಡಗು ಜಿಲ್ಲೆಯ ಮಡಿಕೇರಿ ಹಾಗೂ ಸೋಮವಾರಪೇಟೆ, ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ, ಬೆಳ್ತಂಗಡಿ, ಮಂಗಳೂರು ಹಾಗೂ ಪುತ್ತೂರು, ಉಡುಪಿ ಜಿಲ್ಲೆಯ ಕಾರ್ಕಳ, ಕುಂದಾಪುರ ಹಾಗೂ ಉಡುಪಿ, ಉತ್ತರ ಕನ್ನಡ ಜಿಲ್ಲೆಯ ಅಂಕೋಲ, ಭಟ್ಕಳ, ಹಳಿಯಾಳ, ಹೊನ್ನಾವರ, ಕಾರವಾರ, ಕುಮಟ ಸಿದ್ದಾಪುರ, ಶಿರಸಿ, ಜೊಯಿಡಾ ಹಾಗೂ ಯಲ್ಲಾಪುರ ತಾಲೂಕುಗಳು ‘ಅತಿವೃಷ್ಟಿ-ಪ್ರವಾಹ ಪೀಡಿತ ಪ್ರದೇಶಗಳು’ ಎಂದು ಘೋಷಿಸಲಾಗಿದೆ.




error: Content is protected !!