ಪ್ರಜಾಸ್ತ್ರ ಸಿನಿಮಾ ಡೆಸ್ಕ್
ಶಿವಮೊಗ್ಗ: ಮದುವೆಯಾಗುವುದಾಗಿ ನಂಬಿಸಿ ಕಿರುತರೆ ನಟನಿಂದ ಲಕ್ಷಾಂತರ ರೂಪಾಯಿ ಹಣ ಪಡೆದು ವಂಚಿಸಿದ ಪ್ರಕರಣ ಸಂಬಂಧ ನಟಿ ಉಷಾ ರವಿಶಂಕರ್ ನನ್ನು ಶಿವಮೊಗ್ಗ ವಿನೋಬಾನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಕಿರುತರೆ ನಟ ಶರವಣನ್ ನಟಿ ಉಷಾ ರವಿಶಂಕರ್ ವಿರುದ್ಧ ಕೋರ್ಟಿನಲ್ಲಿ ದೂರು ದಾಖಲಿಸಿದ್ದ. ಹೀಗಾಗಿ ಕೋರ್ಟ್ ನೋಟಿಸ್ ಜಾರಿ ಮಾಡಿತ್ತು. ನಟಿಯನ್ನು ಬಂಧಿಸಿರುವ ಪೊಲೀಸರು ವೈದ್ಯಕೀಯ ತಪಾಸಣೆ ನಡೆಸಿದ್ದು, ನ್ಯಾಯಾಧೀಶರ ಮುಂದೆ ಹಾಜರು ಪಡಿಸಲಿದ್ದಾರೆ.
ನಟಿ ಉಷಾ ರವಿಶಂಕರ್ ಒಂದಲ್ಲ ಎರಡು, ಸಲಗ ಸೇರಿದಂತೆ ಹಲವು ಚಿತ್ರಗಳಲ್ಲಿ, ಧಾರವಾಹಿಗಳಲ್ಲಿ ನಟಿಸಿದ್ದಾರೆ.