ಪ್ರಜಾಸ್ತ್ರ ಸುದ್ದಿ
ಹತ್ರಾಸ್: ಉತ್ತರ ಪ್ರದೇಶದ ಹತ್ರಾಸ್ ಜಿಲ್ಲೆಯ ಫೂಲ್ ರಾಯ್ ಗ್ರಾಮದಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮದಲ್ಲಿ ಸಂಭವಿಸಿದ ಕಾಲ್ತುಳಿತದ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 121ಕ್ಕೆ ಏರಿಕೆಯಾಗಿದೆ. ಇದು ನಿಜಕ್ಕೂ ಅತ್ಯಂತ ಭಯಾನಕ ಘಟನೆ ಎಂದು ಹೇಳಲಾಗುತ್ತಿದೆ. ಹೆಣಗಳ ರಾಶಿ ಕಂಡ ಪೊಲೀಸ್ ಕಾನ್ ಸ್ಟೇಬಲ್ ವೊಬ್ಬರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಬೊಲೆ ಬಾಬಾ ಎನ್ನುವ ವ್ಯಕ್ತಿ ಮಂಗಳವಾರ ನಡೆಸಿದ ಸತ್ಸಂಗದ ಕಾರ್ಯಕ್ರಮದಲ್ಲಿ ಅಪಾರ ಸಂಖ್ಯೆಯಲ್ಲಿ ಜನರು ಸೇರಿದ್ದರು. ಮಧ್ಯಾಹ್ನ 3.30ರ ಸುಮಾರಿಗೆ ಬಾಬಾ ಹೊರಡುವ ವೇಳೆ ಈ ಘಟನೆ ನಡೆದಿದೆ ತಿಳಿದು ಬಂದಿದೆ. ಧಾರ್ಮಿಕ ಕಾರ್ಯಕ್ರಮ ಆಯೋಜಕರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.
ಮೃತರ ಗುರುತು ಪತ್ತೆ ಕೆಲಸ ನಡೆದಿದೆ. ಬಹುತೇಕ ಪೂರ್ಣಗೊಂಡಿದ್ದು, ಇನ್ನೂ 19 ಮೃತದೇಹಗಳ ಗುರುತು ಪತ್ತೆಯಾಗಬೇಕಿದೆ. ಸಾವನ್ನಪ್ಪಿದವರಲ್ಲಿ ಮಹಿಳೆಯರು, ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ.