ಅಯೋಧ್ಯೆ ರಾಮಪಥ ಜಲಾವೃತ: ಅಧಿಕಾರಿಗಳ ಅಮಾನತು

65

ಪ್ರಜಾಸ್ತ್ರ ಸುದ್ದಿ

ಅಯೋಧೆ: ಇತ್ತೀಚೆಗಷ್ಟೇ ಉದ್ಘಾಟನೆಗೊಂಡ ರಾಮ ಮಂದಿರಕ್ಕೆ ಸಂಪರ್ಕ ಕಲ್ಪಿಸುವ ನೂತನ ರಸ್ತೆಯಾದ ರಾಮಪಥ ಮಳೆಯಿಂದಾಗಿ ಜಲಾವೃತಗೊಂಡಿದೆ. ಗುಂಡಿಗಳು ಬಿದ್ದಿವೆ. ಈ ಸಂಬಂಧ ಪಾಲಿಕೆಯ 6 ಅಧಿಕಾರಿಗಳನ್ನು ಸರ್ಕಾರ ಅಮಾನತುಗೊಳಿಸಿದೆ.

14 ಕಿಲೋ ಮೀಟರ್ ರಸ್ತೆಯಲ್ಲಿ 12ಕ್ಕೂ ಹೆಚ್ಚು ಕಡೆ ಗುಂಡಿಗಳು ಬಿದ್ದಿವೆ. ರಸ್ತೆ ಅಕ್ಕಪಕ್ಕದ ಮನೆಯೊಳಗೆ ನೀರು ನುಗ್ಗಿವೆ. ಇದು ಎಲ್ಲೆಡೆ ವೈರಲ್ ಆಗಿದ್ದು, ಯೋಗಿ ಆದಿತ್ಯನಾಥ್ ನೇತೃತ್ವದ ಬಿಜೆಪಿ ಸರ್ಕಾರದ ವಿರುದ್ಧ ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಲೋಕೋಪಯೋಗಿ ಇಲಾಖೆಯ ಎಂಜಿನಿಯರ್ ಗಳನ್ನು, ಉತ್ತರ ಪ್ರದೇಶ ಜಲ ನಿಗಮದ ಕಾರ್ಯನಿರ್ವಾಹಕ ಎಂಜಿನಿಯರ್, ಸಹಾಯಕ ಎಂಜಿನಿಯರ್ ಸೇರಿ 6 ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ. ಗುಜರಾತಿನ ಅಹಮದಾಬಾದ್ ಮೂಲಕದ ಗುತ್ತಿಗೆದಾರ ಭುವನ್ ಇನ್ ಫ್ರಾಕಾಮ್ ಪ್ರೈ.ಲಿ ಕಂಪನಿಗೆ ಸರ್ಕಾರ ನೋಟಿಸ್ ನೀಡಿದೆ.




Leave a Reply

Your email address will not be published. Required fields are marked *

error: Content is protected !!