ಪ್ರಜಾಸ್ತ್ರ ಸುದ್ದಿ
ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಶುಕ್ರವಾರ ಮಳೆರಾಯ ಆರ್ಭಟಿಸಿದ್ದಾನೆ. ಕಳೆದ 88 ವರ್ಷಗಳಲ್ಲೇ ಅಧಿಕ ಮಳೆಯಾಗಿದೆ. ಇದರಿಂದಾಗಿ ಪ್ರವಾಹ ಸ್ಥಿತಿ ನಿರ್ಮಾಣವಾಗಿದೆ. ಅಪಾರ ಪ್ರಮಾಣ ಆಸ್ತಿ ಹಾನಿಯಾಗಿದೆ. ಜನಜೀವನ ಅಸ್ತವ್ಯಸ್ಥಗೊಂಡಿದೆ. ಇಬ್ಬರು ಮಕ್ಕಳು ಸೇರಿದಂತೆ 7 ಜನರು ಪ್ರಾಣ ಕಳೆದುಕೊಂಡಿದ್ದಾರೆ.
ಶುಕ್ರವಾರ ಮುಂಜಾನೆ 4 ಗಂಟೆಯಿಂದ 8.30ರ ತನಕ ಮಳೆಯಾಗಿದೆ. ಮುಂಗಾರು ಪ್ರವೇಶಿಸಿದ ಮೊದಲ ದಿನವೇ 23 ಸೆ.ಮೀ ಮಳೆಯಾಗಿದೆ. ಈ ಮೂಲಕ ಕಳೆದ 88 ವರ್ಷಗಳ ನಂತರ ಇಷ್ಟೊಂದು ಪ್ರಮಾಣ ಮಳೆಯಾಗಿದೆ. ಇದರಿಂದಾಗಿ ಜನರು ಅಕ್ಷರಶಃ ತತ್ತರಿಸಿ ಹೋಗಿದ್ದಾರೆ.