ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ರಾಜ್ಯದಲ್ಲಿ ಸಾಕಷ್ಟು ಸದ್ದು ಮಾಡಿದ ಬಹುಕೋಟಿ ವಂಚನೆಯ ಐಎಂಎ ಪ್ರಕರಣ ಸಂಬಂಧ ಮೂವರು ಪೊಲೀಸರನ್ನ ಸಸ್ಪೆಂಡ್ ಮಾಡಲಾಗಿದೆ. ಇತ್ತೀಚೆಗಷ್ಟೇ ಸಿಬಿಐ ಕೋರ್ಟ್ ಗೆ ಮಧ್ಯಂತರ ಚಾರ್ಜ್ ಶೀಟ್ ಸಲ್ಲಿಸಿದೆ. ಇದರ ಬೆನ್ನಲ್ಲೇ ಇದೀಗ ಮೂವರು ಪೊಲೀಸರು ಸಸ್ಪೆಂಡ್ ಆಗಿದ್ದಾರೆ.
ಸಿಐಡಿ ವಿಭಾಗದ ಡಿವೈಎಸ್ಪಿ ಆಗಿದ್ದ ಇ.ಬಿ ಶೀಧರ, ಪಿಎಸ್ಐ ಗೌರಿಶಂಕರ, ಕಮರ್ಷಿಯಲ್ ಸ್ಟ್ರೀಟ್ ಠಾಣೆ ಎನ್ಸ್ ಪೆಕ್ಟರ್ ರಮೇಶ ಅನ್ನೋ ಮೂವರನ್ನ ರಾಜ್ಯ ಸರ್ಕಾರ ಅಮಾನತುಗೊಳಿಸಿ ಆದೇಶ ಹೊರಡಿಸಿದೆ. ಈ ಪ್ರಕರಣದಲ್ಲಿ ಐಜಿಪಿ ಹೇಮಂತ ನಿಂಬಾಳ್ಕರ್, ಕೆಎಸ್ಆರ್ ಪಿ ಕಮಾಡೆಂಟ್ ಅಜಯ ಹಿಲೋರಿ ಸೇರಿದಂತೆ ಐವರು ಹಿರಿಯ ಪೊಲೀಸ್ ಅಧಿಕಾರಿಗಳ ಹೆಸರು ಸೇರಿ 28 ಜನರ ಹೆಸರು ಚಾರ್ಜ್ ಶೀಟ್ ನಲ್ಲಿ ದಾಖಲಾಗಿತ್ತು.
ಮೇಲಾಧಿಕಾರಿಗಳನ್ನ ಹೊರತು ಪಡಿಸಿ ಕೆಳ ಹಂತದ ಪೊಲೀಸ್ ಅಧಿಕಾರಿಗಳನ್ನ ರಾಜ್ಯ ಸರ್ಕಾರ ಅಮಾನತು ಮಾಡಿ ಆದೇಶಿಸಿದೆ.