ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಕೆಎಎಸ್ ಅಧಿಕಾರಿ ಪತ್ನಿ ಹಾಗೂ ಹೈಕೋರ್ಟ್ ವಕೀಲೆಯಾಗಿರುವ ಚೈತ್ರಾಗೌಡ ಎಂಬುವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಂಜಯನಗರದಲ್ಲಿರುವ ನಿವಾಸದಲ್ಲಿ ಫ್ಯಾನಿಗೆ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಕೆಎಎಸ್ ಅಧಿಕಾರಿ ಶಿವಕುಮಾರ್ ಅವರ ಪತ್ನಿ ಚೈತ್ರಾ ಅವರ ಸಾವಿಗೆ ಕಾರಣಗಳು ತಿಳಿದು ಬಂದಿಲ್ಲ. ಮನೆಯಲ್ಲಿ ಯಾವುದೇ ಡೆತ್ ನೋಟ್ ಪತ್ತೆಯಾಗಿಲ್ಲ. ಮೃತದೇಹವನ್ನು ಎಂ.ಎಸ್ ರಾಮಯ್ಯ ಆಸ್ಪತ್ರೆಗೆ ರವಾನಿಸಲಾಗಿದೆ.
ಚೈತ್ರಾ ಸಹೋದರ ಸಂಜಯ ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸಿದ್ದಾರೆ.