ಐವರು ಯೋಧರು ನೀರುಪಾಲು, ರಾಹುಲ್, ಖರ್ಗೆ ಸಂತಾಪ

66

ಪ್ರಜಾಸ್ತ್ರ ಸುದ್ದಿ

ನವದೆಹಲಿ: ಲಡಾಖ್ನ ಶ್ಯೋಕ್ ನದಿ ದಾಟುವ ಸಂದರ್ಭದಲ್ಲಿ ಭಾರತೀಯ ಸೇನಾ ಪಡೆಯ ಟ್ಯಾಂಕ್ ಕೊಚ್ಚಿಕೊಂಡು ಹೋಗಿದೆ. ಇದರಿಂದಾಗಿ ಐವರು ಯೋಧರು ಮೃತಪಟ್ಟಿದ್ದಾರೆ. ಇವರ ಸಾವು ನಮಗೆ ಸಾಕಷ್ಟು ನೋವು ತಂದಿದೆ ಎಂದು ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಹಾಗೂ ರಾಜ್ಯಸಭಾ ವಿಪಕ್ಷ ನಾಯಕ ಮಲ್ಲಿಕಾರ್ಜುನ್ ಖರ್ಗೆ ಹೇಳಿದ್ದಾರೆ.

ಯೋಧರ ಕುಟುಂಬಸ್ಥರಿಗೆ ನಮ್ಮ ಸಂತಾಪಗಳು. ಇಂತಹ ಸಂದರ್ಭದಲ್ಲಿ ನಾವು ಅವರೊಂದಿಗೆ ನಿಲ್ಲುತ್ತೇವೆ. ಅವರ ಸೇವೆ, ತ್ಯಾಗ, ಸಮರ್ಪಣೆಯನ್ನು ದೇಶ ಯಾವಾಗಲೂ ಸ್ಮರಿಸುತ್ತದೆ ಎಂದು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಹಂಚಿಕೊಂಡಿದ್ದಾರೆ. ಯುದ್ಧ ತಾಲೀಮು ನಡೆಸುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ.




Leave a Reply

Your email address will not be published. Required fields are marked *

error: Content is protected !!