ರೇಣುಕಾಚಾರ್ಯ ಹಾಗೂ ಮಗನಿಗೆ ಕೊಲೆ ಬೆದರಿಕೆ, ದೂರು

81

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಬಿಜೆಪಿ ಮಾಜಿ ಶಾಸಕ ಎಂ.ಪಿ ರೇಣುಕಾಚಾರ್ಯಗೆ ಅಪರಿಚಿತ ವ್ಯಕ್ತಿಯೊಬ್ಬ ಕೊಲೆ ಬೆದರಿಕೆ ಹಾಕಿದ್ದಾನೆ ಎಂದು ದೂರು ದಾಖಲಿಸಲಾಗಿದೆ. ಸೋಮವಾರ ಮಧ್ಯಾಹ್ನ ಎರಡು ಬಾರಿ ಬೇರೆ ಬೇರೆ ನಂಬರ್ ಗಳಿಂದ ಫೋನ್ ಮಾಡಿ ಕೊಲೆ ಬೆದರಿಕೆ ಹಾಕಿದ್ದಾನಂತೆ.

ಏಯ್, ನಿನ್ನ ಹಾಗೂ ನಿನ್ನ ಮಗನನ್ನ ಇವತ್ತು ರಾತ್ರಿ ಎತ್ತಿ ಬಿಡುತ್ತೇವೆ ಎಂದು ಬೆದರಿಕೆ ಹಾಕಿದ್ದಾನೆ ಅಂತಾ ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದೇನೆ ಎಂದಿದ್ದಾರೆ.

ಇನ್ನು ಇದರ ಜೊತೆಗೆ ತವರು ಕ್ಷೇತ್ರವಾದ ದಾವಣಗೆರೆ ಜಿಲ್ಲೆಯ ಹೊನ್ನಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪದೆಪದೆ ನನ್ಗೆ ಮತ್ತು ನನ್ನ ಕುಟುಂಬದವರಿಗೆ ಜೀವ ಬೆದರಿಕೆ ಹಾಕುತ್ತಿದ್ದು, ಅವರು ಯಾರೆಂದು ಪತ್ತೆ ಹಚ್ಚಬೇಕು. ನಮ್ಗೆ ಸೂಕ್ತ ಭದ್ರತೆ ನೀಡಬೇಕು ಎಂದು ಎಂ.ಪಿ ರೇಣುಕಾಚಾರ್ಯ ಹೇಳಿದ್ದಾರೆ.




error: Content is protected !!