ಬಿಜೆಪಿ 200 ಸಹ ದಾಟುವುದಿಲ್ಲ: ಮಲ್ಲಿಕಾರ್ಜುನ್ ಖರ್ಗೆ

93

ಪ್ರಜಾಸ್ತ್ರ ಸುದ್ದಿ

ಚಂಡೀಗಡ: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹಾಗೂ ಇಂಡಿಯಾ ಮೈತ್ರಿಕೂಟದ ಪಕ್ಷಗಳಿಗೆ ಹೆಚ್ಚಿನ ಲಾಭವಾಗಲಿದೆ. ಬಿಜೆಪಿ 400 ಅಲ್ಲ 200 ಸಹ ದಾಟುವುದಿಲ್ಲವೆಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಹೇಳಿದ್ದಾರೆ.

ಅಮೃತಸರದಲ್ಲಿ ಚುನಾವಣಾ ಪ್ರಚಾರ ಉದ್ದೇಶಿಸಿ ಮಾತನಾಡಿದ ಅವರು, 400ಕ್ಕೂ ಹೆಚ್ಚು ಸ್ಥಾನ ಗೆಲ್ಲುತ್ತೇವೆ ಎನ್ನುವುದು ಬಿಟ್ಟು ಬಿಡಿ. ಅದೊಂದು ಬಕ್ವಾಸ್ ಹೇಳಿಕೆ. ನೀವು ಸರ್ಕಾರ ಸಹ ರಚನೆ ಮಾಡುವುದಿಲ್ಲ. ದಕ್ಷಿಣ ಭಾರತದ ರಾಜ್ಯಗಳಲ್ಲಿ ಬಿಜೆಪಿ ಸಾಕಷ್ಟು ದುರ್ಬಲವಾಗಿದೆ.

ಕರ್ನಾಟಕ, ಮಹಾರಾಷ್ಟ್ರದಲ್ಲಿ ದುರ್ಬಲವಾಗಿದೆ. ಕೇರಳ, ತಮಿಳುನಾಡು, ತೆಲಂಗಾಣದಲ್ಲಿ ಅಸ್ತಿತ್ವದಲ್ಲಿಯೇ ಇಲ್ಲ. ಒಡಿಶಾ, ಪಶ್ಚಿಮ ಬಂಗಾಳದಲ್ಲಿ ಸ್ವಲ್ಪ ಮಟ್ಟಿನ ಸ್ಪರ್ಧೆಯಿದೆ. ಹೀಗಾಗಿ 400 ಸ್ಥಾನ ಗೆಲ್ಲಲು ಹೇಗೆ ಸಾಧ್ಯವೆಂದು ಪ್ರಶ್ನಿಸಿದ್ದಾರೆ.




error: Content is protected !!