ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಣ ಅಕ್ರಮ ವರ್ಗಾವಣೆ ಸಂಬಂಧ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಖಾತೆ ಸಚಿವ ಬಿ.ನಾಗೇಂದ್ರ ರಾಜೀನಾಮೆ ಘೋಷಿಸಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸಂಜೆ 7.30ಕ್ಕೆ ಮುಖ್ಯಮಂತ್ರಿಯವರನ್ನು ಭೇಟಿಯಾಗಿ ರಾಜೀನಾಮೆ ಸಲ್ಲಿಸುತ್ತೇನೆ. ಆದರೆ, ನನ್ನ ರಾಜೀನಾಮೆಗೆ ಸಿಎಂ, ಡಿಸಿಎಂ ಯಾರ ಒತ್ತಡವೂ ಇಲ್ಲ ಎಂದಿದ್ದಾರೆ.
ಈ ಪ್ರಕರಣದ ತನಿಖೆ ಎಸ್ಐಟಿ ಮಟ್ಟದಲ್ಲಿ ನಡೆಯುತ್ತಿದೆ. ಹೀಗಾಗಿ ನಾನು ಸಚಿವ ಸ್ಥಾನದಲ್ಲಿ ಮುಂದುವರೆಯುವುದು ಸರಿಯಲ್ಲ. ನನ್ನಿಂದ ಪಕ್ಷಕ್ಕೆ, ನಾಯಕರಿಗೆ ಮುಜುಗರವಾಗುವುದನ್ನು ತಪ್ಪಿಸಲು ರಾಜೀನಾಮೆ ಸಲ್ಲಿಸುತ್ತಿದ್ದೇನೆ ಅಂತಾ ಹೇಳಿದ್ದಾರೆ.