ಒಂದೇ ಕುಟುಂಬದ ಮೂವರ ನಿಗೂಢ ಸಾವು

106

ಪ್ರಜಾಸ್ತ್ರ ಸುದ್ದಿ

ಕೊಪ್ಪಳ: ಒಂದೇ ಕುಟುಂಬದ ಮೂವರು ನಿಗೂಢವಾಗಿ ಸಾವನ್ನಪ್ಪಿದ ಘಟನೆ ಹೊಸ ಲಿಂಗಾಪುರ ಗ್ರಾಮದ ಆಶ್ರಯ ಕಾಲೋನಿಯಲ್ಲಿ ನಡೆದಿದೆ. ಇದರಿಂದಾಗಿ ಇಡೀ ಗ್ರಾಮದಲ್ಲಿ ನೀರವ ಮೌನ ಆವರಿಸಿಕೊಂಡಿದೆ.

5 ವರ್ಷದ ಬಾಲಕ ಸಾಯಿತೇಜ, ಇವನ ತಾಯಿ ವಸಂತಾ(28) ಹಾಗೂ ರಾಜೇಶ್ವರಿ(50) ಎಂಬುವರು ಮೃತಪಟ್ಟಿದ್ದಾರೆ. ಮಂಗಳವಾರ ಮುಂಜಾನೆ ಪ್ರಕರಣ ಬೆಳಕಿಗೆ ಬಂದಿದೆ. ಮನೆ ಬಾಗಿಲು ತೆರದೆ ಇತ್ತು. ಇದನ್ನು ನೋಡಿದ ಜನರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಮುನಿರಾಬಾದ್ ಪೊಲೀಸ್ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೂವರು ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ವಸಂತಾ ಪತಿ ಯಾರು? ಏನು ಕೆಲಸ ಮಾಡುತ್ತಿದ್ದಾರೆ? ಎಲ್ಲಿದ್ದಾರೆ? ಈ ಸಾವುಗಳು ಹೇಗೆ ನಡೆದವು ಅನ್ನೋದರ ತನಿಖೆ ನಡೆಸಲಾಗುತ್ತಿದೆ.




Leave a Reply

Your email address will not be published. Required fields are marked *

error: Content is protected !!