ಪ್ರಜಾಸ್ತ್ರ ಸುದ್ದಿ
ನವದೆಹಲಿ: ದೇಶದಲ್ಲಿ ಸಾಕಷ್ಟು ಸಂಚಲನ ಮೂಡಿಸಿರುವ, ಸಾವಿರಾರು ವಿದ್ಯಾರ್ಥಿಗಳು ಭವಿಷ್ಯದ ಜೊತೆಗೆ ಚಲ್ಲಾಟವಾಡಿದ ನೀಟ್ ಪರೀಕ್ಷೆಯ ಅಕ್ರಮಕ್ಕೆ ಸಂಬಂಧಿಸಿದಂತೆ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಮಾತನಾಡಿದ್ದಾರೆ. ಸಂಸತ್ತಿನಲ್ಲಿ ನೀಟ್ ಅಕ್ರಮದ ಕುರಿತು ಚರ್ಚಿಸಲು ಅವಕಾಶ ನೀಡಬೇಕು ಎಂದಿದ್ದಾರೆ.
ಶುಕ್ರವಾರ ಈ ಬಗ್ಗೆ ಮಾತನಾಡಿದ ಅವರು, ನೀಟ್ ಪರೀಕ್ಷೆಯ ಅಕ್ರಮ ಬಹಳ ಗಂಭೀರವಾಗಿದೆ. ಇದು ಯುವಕರ ಭವಿಷ್ಯದ ವಿಷಯವಾಗಿದೆ. ಇದಕ್ಕಾಗಿ ಸಂಸತ್ತಿನಲ್ಲಿ ಒಂದು ದಿನ ಚರ್ಚೆಗೆ ಮೀಸಲಿಡಬೇಕು ಎಂದು ಒತ್ತಾಯಿಸಿದ್ದಾರೆ.
ಪಿಯುಸಿಯಲ್ಲಿ ಅನುತ್ತೀರ್ಣಗೊಂಡವರು ನೀಟ್ ನಲ್ಲಿ ಟಾಪರ್ ಆಗಿ ಹೊರ ಹೊಮ್ಮಿರುವುದು ಸೇರಿದಂತೆ ಸಾಕಷ್ಟು ಅಕ್ರಮ ನಡೆದಿರುವುದು ಬೆಳಕಿಗೆ ಬಂದಿದೆ. ಈ ಸಂಬಂಧ ಅನೇಕರನ್ನು ಬಂಧಿಸಲಾಗಿದೆ. ದೇಶವ್ಯಾಪಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ.