ಮುಂದಿನ 4 ದಿನ ರಾಜ್ಯದಲ್ಲಿ ವರುಣನ ಆರ್ಭಟ

246

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಈಗಾಗ್ಲೇ ರಾಜ್ಯದ ತುಂಬಾ ಭರ್ಜರಿ ಮಳೆಯಾಗ್ತಿದೆ. ಹೀಗಾಗಿ ಕೃಷಿ ಚಟುವಟಿಕೆಗಳು ಬಿರುಸಿನಿಂದ ಕೂಡಿವೆ. ಬಂಗಾಳಕೊಲ್ಲಿ ವಾಯುಭಾರ ಕುಸಿತವಾಗಿರುವುದ್ರಿಂದ ಮುಂದಿನ ನಾಲ್ಕು ದಿನಗಳ ಭರ್ಜರಿ ಮಳೆಯಾಗಲಿದೆಯಂತೆ.

ಜುಲೈ 9ರಿಂದ 11ರ ತನಕ ಭಾರೀ ಮಳೆಯಾಗಲಿದ್ದು, ಕರಾವಳಿ, ಮಲೆನಾಡು ಪ್ರದೇಶದಲ್ಲಿ ಗುಡುಗು ಸಹಿತ ಮಳೆ ಕಾಣಿಸಿಕೊಳ್ಳಲಿದೆ. ಇನ್ನು ಬೆಂಗಳೂರು, ತುಮಕೂರು, ದಾವಣಗೆರೆ, ಚಿತ್ರದುರ್ಗ, ಕೋಲಾರ, ಚಿಕ್ಕಬಳ್ಳಾಪುರ, ಹುಬ್ಬಳ್ಳಿ-ಧಾರವಾಡ, ಬೆಳಗಾವಿ, ಗದಗ, ಹಾವೇರಿ, ಬಾಗಲಕೋಟೆ, ವಿಜಯಪುರ, ಕಲಬುರಗಿ, ಬಳ್ಳಾರಿ, ಬೀದರ ಸೇರಿದಂತೆ ರಾಜ್ಯಾದ್ಯಂತ ವರುಣನ ಆರ್ಭಟ ಮುಂದುವರೆಯಲಿದೆ.




error: Content is protected !!