ಪ್ರಜಾಸ್ತ್ರ ಸುದ್ದಿ
ಭುವನೇಶ್ವರ್: ವಿಧಾನಸಭೆ ಹಾಗೂ ಲೋಕಸಭೆಯಲ್ಲಿ ಸೋಲು ಅನುಭವಿಸಿರುವ ಬಿಜೆಡಿ(ಬಿಜು ಜನತಾದಳ) ನಾಯಕ ನವೀನ್ ಪಟ್ನಾಯಕ್ ಬುಧವಾರ ಸಿಎಂ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ರಾಜ್ಯಪಾಲ ರಘುಬರ್ ದಾಸ್ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.
147 ಸ್ಥಾನಗಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 80 ಸ್ಥಾನ ಗಳಿಸಿ ಸರಳ ಬಹುಮತ ಪಡೆದಿದೆ. 49 ಸ್ಥಾನಗಳಲ್ಲಿ ಬಿಜೆಡಿ ಗೆಲುವು ಸಾಧಿಸಿ ಗೌರವ ಉಳಿಸಿಕೊಂಡಿದೆ.
ಇನ್ನು 21 ಲೋಕಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಬರೋಬ್ಬರಿ 20 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ. ಕಾಂಗ್ರೆಸ್ 1ರಲ್ಲಿ ಗೆದ್ದಿದೆ.