ಪಿಎಂ ಕಿಸಾನ್ ನಿಧಿಯ 17ನೇ ಕಂತಿಗೆ ಸಹಿ

75

ಪ್ರಜಾಸ್ತ್ರ ಸುದ್ದಿ

ನವದೆಹಲಿ: ಮೂರನೇ ಅವಧಿಗೆ ಪ್ರಧಾನಿಯಾಗಿ ಮೋದಿ ಭಾನುವಾರ ಸಂಜೆ ಅಧಿಕಾರ ವಹಿಸಿಕೊಂಡಿದ್ದಾರೆ. ಇಂದು ಪಿಎಂ ಕಿಸಾನ್ ನಿಧಿಯ 17ನೇ ಕಂತಿಗೆ ಮೊದಲ ಸಹಿ ಹಾಕುವ ಮೂಲಕ ಕೆಲಸ ಪ್ರಾರಂಭಿಸಿದ್ದಾರೆ.

20 ಸಾವಿರ ಕೋಟಿಯ ಯೋಜನೆ ದೇಶದ 9.3 ಕೋಟಿ ರೈತರಿಗೆ ಅನುಕೂಲವಾಗಲಿದೆ. ಈ ವೇಳೆ ಮಾತನಾಡಿರುವ ಪ್ರಧಾನಿ ಮೋದಿ, ನಮ್ಮದು ರೈತರ ಕಲ್ಯಾಣಕ್ಕೆ ಬದ್ಧರಾಗಿರುವ ಸರ್ಕಾರ. ಆದ್ದರಿಂದ ಮೊದಲ ಕಡತಕ್ಕೆ ಸಹಿ ಹಾಕಿದ್ದೇನೆ. ಮುಂದಿನ ದಿನಗಳಲ್ಲಿ ಕೃಷಿ ಕ್ಷೇತ್ರಕ್ಕೆ ಇನ್ನಷ್ಟು ಕೆಲಸ ಮಾಡುತ್ತೇವೆ ಎಂದಿದ್ದಾರೆ.




Leave a Reply

Your email address will not be published. Required fields are marked *

error: Content is protected !!