ಬೆಂಕಿಗೆ ಆಹುತಿಯಾದ ಕಬ್ಬು

582

ಪ್ರಜಾಸ್ತ್ರ ಸುದ್ದಿ

ವಿಜಯಪುರ: ಆಕಸ್ಮಿಕ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ನಾಲ್ಕು ಎಕರೆ ಕಬ್ಬು ಭಸ್ಮವಾಗಿರುವ ಘಟನೆ ಜಿಲ್ಲೆಯ ಸಿಂದಗಿ ತಾಲೂಕಿನ ವಂದಾಲ ಗ್ರಾಮದಲ್ಲಿ ನಡೆದಿದೆ. ರೈತ ಅನೀಲಕುಮಾರ ಬಡಿಗೇರ ಅನ್ನೋ ರೈತನ ಹೊಲದಲ್ಲಿನ ಕಬ್ಬು ಬೆಂಕಿಗೆ ಆಹುತಿಯಾಗಿದೆ.

ವಿದ್ಯುತ್ ತಂತಿ ಹರಿದ ಪರಿಣಾಮ 4 ಎಕರೆಯಲ್ಲಿ ಬೆಳೆದ ಕಬ್ಬು ಸಂಪೂರ್ಣ ಸುಟ್ಟು ಹೋಗಿದೆ. ತುಂಬಾ ಹಳೆಯದಾದ ವಿದ್ಯುತ್ ತಂತಿಯನ್ನು ಕೆಇಬಿ ಅವರು ತೆಗೆಯದ ಇರುವುದರಿಂದ ಈ ಅನಾಹುತ ನಡೆದಿದೆ ಎಂದು ಆರೋಪಿಸಲಾಗಿದೆ. ತಮ್ಮ ವರ್ಷದ ಬದುಕು ಹಾಳಾಗಿದ್ದು, ಹೆಸ್ಕಾಂ ಹಾಗೂ ಸರ್ಕಾರ ಪರಿಹಾರ ನೀಡಬೇಕೆಂದು ರೈತ ಆಗ್ರಹಿಸಿದ್ದಾನೆ.




Leave a Reply

Your email address will not be published. Required fields are marked *

error: Content is protected !!