ಬೆಲೆ ಏರಿಕೆ, ಸಿಎಂ ಮನೆಗೆ ಮುತ್ತಿಗೆ ಹಾಕುತ್ತೇವೆ: ಆರ್.ಅಶೋಕ್

59

ಪ್ರಜಾಸ್ತ್ರ ಸುದ್ದಿ

ಬೆಳಗಾವಿ: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಬಳಿಕ ನಂದಿನಿ ಹಾಲಿನ ದರ ಸಹ ಏರಿಕೆಯಾಗಿದೆ. ಇದನ್ನು ಖಂಡಿಸಿರುವ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್, ಬೆಲೆ ಏರಿಕೆಯಿಂದ ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಜುಲೈ 3 ಅಥವ 4ರಂದು ಸಿಎಂ ಮನೆಗೆ ಮುತ್ತಿಗೆ ಹಾಕುತ್ತೇವೆ ಎಂದಿದ್ದಾರೆ.

ಕಾಂಗ್ರೆಸ್ ಸರ್ಕಾರ ಹುಚ್ಚರ ಸಂತೆಯಾಗಿದೆ. ಒಂದೇ ವರ್ಷದಲ್ಲಿ 2 ಬಾರಿ ಹಾಲಿನ ದರ ಏರಿಕೆ ಮಾಡಿದ್ದಾರೆ. ಇದೊಂದು ರೀತಿ ತುಘಲಕ್ ಸರ್ಕಾರ. ಅವೈಜ್ಞಾನಿಕವಾಗಿ ಗ್ಯಾರೆಂಟಿಗಳನ್ನು ಜಾರಿಗೆ ತಂದು ಈಗ ಹಣ ಹೊಂದಿಸಲು ಬೆಲೆ ಏರಿಕೆ ಮಾಡುತ್ತಿದ್ದಾರೆ.

ಸರ್ಕಾರದ ಹತ್ತಿರ ಹಣ ಖಾಲಿಯಾಗಿದೆ. ಸಂಬಳ ಕೊಡಲು ಹಣವಿಲ್ಲ. ಲೋಕಸಭೆ ಚುನಾವಣೆಯಲ್ಲಿ ಮತ ಹಾಕಿಲ್ಲವೆಂದು ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ವಾಗ್ದಾಳಿ ನಡೆಸಿದರು.




error: Content is protected !!