ಪ್ರಜಾಸ್ತ್ರ ಸುದ್ದಿ
ಲಖನೌ: ಉತ್ತರ ಪ್ರದೇಶದ ಹತ್ರಾಸ್ ನಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮವೊಂದರಲ್ಲಿ ಕಾಲ್ತುಳಿತಕ್ಕೆ ಬರೋಬ್ಬರಿ 27 ಜನರು ಮೃತಪಟ್ಟ ಘಟನೆ ನಡೆದಿದೆ. ಮೂವರು ಮಕ್ಕಳು ಸೇರಿದಂತೆ 27 ಜನರ ಸಾವಾಗಿದೆ. ಇದರಲ್ಲಿ ಮಹಿಳೆಯರ ಸಂಖ್ಯೆ ಹೆಚ್ಚಿನದಾಗಿದೆ.
ಮೋಘಲ್ ರಾಹಿ ಅನ್ನೋ ಗ್ರಾಮದಲ್ಲಿ ಬಾಬಾ ಅವರ ಧಾರ್ಮಿಕ ಕಾರ್ಯಕ್ರಮದಲ್ಲಿ ಈ ಘಟನೆ ನಡೆದಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.