ವಿಪಕ್ಷಗಳ ಆರೋಪಕ್ಕೆ ತಿರುಗೇಟು ನೀಡಲು ಸರ್ಕಾರ ಸಜ್ಜು!

329

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ, ಜೆಡಿಎಸ್ ನಾಯಕರು ಒಂದಲ್ಲ ಒಂದು ಆರೋಪಗಳನ್ನು ಮಾಡುತ್ತಿದ್ದಾರೆ. ಅದರಲ್ಲೂ ಸಚಿವ ಚಲುವರಾಯಸ್ವಾಮಿ ವಿರುದ್ಧ ಎರಡು ಬಾರಿ ಗಂಭೀರ ಆರೋಪಗಳನ್ನು ಮಾಡಲಾಗಿದೆ. ಈಗ ಬಿಬಿಎಂಪಿ ಗುತ್ತಿಗೆದಾರರ ಬಿಲ್ ವಿಚಾರ.

ಬಿಜೆಪಿ, ಜೆಡಿಎಸ್ ನಾಯಕರ ಗಂಭೀರ ಆರೋಪಗಳಿಗೆ ತಿರುಗೇಟು ನೀಡಲು ಸರ್ಕಾರ ಸಜ್ಜಾಗುತ್ತಿದೆ. ಜನರಲ್ಲಿ ನಮ್ಮ ಬಗ್ಗೆ ತಪ್ಪು  ಕಲ್ಪನೆ ಬರುವಂತೆ ಮಾಡಲಾಗುತ್ತಿದೆ. ಯಾವುದೇ ಕೆಲಸ ಮಾಡಿದರೂ ಎಚ್ಚರಿಕೆಯಿಂದ ಮಾಡಬೇಕು. ವಿಪಕ್ಷಗಳಿಗೆ ಆರೋಪಗಳಿಗೆ ಅವಕಾಶ ಕೊಡದಂತೆ ಕೆಲಸ ಮಾಡಬೇಕಿದೆ. ನಮ್ಮ ಐದು ಗ್ಯಾರೆಂಟಿಗಳ ಗುರಿ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಸಚಿವರ ಒಗ್ಗಟ್ಟಿನ ಮಂತ್ರ ಜಪಿಸಿದ್ದಾರೆ. ನಕಲಿ ಪತ್ರವೆಂದು ಹೇಳಲಾಗುತ್ತಿದೆ. ಈ ಕುರಿತು ತನಿಖೆಗೂ ಆದೇಶಿಸಲಾಗಿದೆ. ಸೋಲಿನ ಹತಾಶೆಯಲ್ಲಿರುವ ಬಿಜೆಪಿ, ಜೆಡಿಎಸ್ ಇಲ್ಲದ ಕಥೆ ಕಟ್ಟುವ ಮೂಲಕ ಸರ್ಕಾರಕ್ಕೆ ಹಾಗೂ ಮುಂಬರುವ ಲೋಕಸಭಾ ಚುನಾವಣೆ ಟಾರ್ಗೆಟ್ ಮಾಡಿ ಈ ರೀತಿ ಮಾಡಲಾಗುತ್ತಿದೆ ಎಂದು ಸಚಿವರು ಹೇಳುತ್ತಿದ್ದು, ಎಲ್ಲ ರೀತಿಯಿಂದಲೂ ವಿಪಕ್ಷಗಳಿಗೆ ತಿರುಗೇಟು ನೀಡಲು ಸರ್ಕಾರ ಸಜ್ಜಾಗುತ್ತಿದೆ.




error: Content is protected !!