ನಟ, ಸಚಿವ ಉದಯನಿಧಿ ಬೆಂಗಳೂರು ಕೋರ್ಟಿಗೆ ಹಾಜರಾಗುವ ಸಾಧ್ಯತೆ

52

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಸನಾತನ ಧರ್ಮಕ್ಕೆ ಸಂಬಂಧಿಸಿದಂತೆ ನೀಡಿದ ಹೇಳಿಕೆ ವಿಚಾರವಾಗಿ ತಮಿಳುನಾಡಿನ ಸಚಿವ, ನಟ ಉದಯನಿಧಿ ಸ್ಟಾಲಿನ್ ಇಂದು ಬೆಂಗಳೂರಿನ ಕೋರ್ಟಿಗೆ ಹಾಜರಾಗುವ ಸಾಧ್ಯತೆಯಿದೆ.

ಪರಮೇಶ್ ಎಂಬುವರು ಸಲ್ಲಿಸಿದ ಅರ್ಜಿಯ ಹಿನ್ನಲೆಯಲ್ಲಿ ಕೋರ್ಟ್ ಉದಯನಿಧಿ ಅವರಿಗೆ ನೋಟಿಸ್ ಜಾರಿ ಮಾಡಿತ್ತು. ಹೀಗಾಗಿ ಇಂದು ಮೆಟ್ರೊಪಾಲಿಟನ್ ಮ್ಯಾಜಿಸ್ಟ್ರೇಟ್ ಕೋರ್ಟ್ ಮುಂದೆ ಹಾಜರಾಗಲಿದ್ದಾರೆ ಎಂದು ಹೇಳಲಾಗುತ್ತಿದೆ.

ಸೆಪ್ಟೆಂಬರ್ 4, 2023ರಂದು ಚೆನ್ನೈನ ತೇನಂಪೇಟೆಯಲ್ಲಿ ನಡೆದ ಸನಾತನ ಧರ್ಮ ನಿರ್ಮೂಲನಾ ಸಮಾವೇಶದಲ್ಲಿ ಮಾತನಾಡಿದ ಸಚಿವ ಉದಯನಿಧಿ ಸ್ಟಾಲಿನ್ ವಾಗ್ದಾಳಿ ನಡೆಸಿದ್ದರು. ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ ಎಂದು ಆಕ್ರೋಶ ವ್ಯಕ್ತವಾಗಿತ್ತು. ಇದೇ ವಿಚಾರವಾಗಿ ದೂರು ಸಹ ದಾಖಲಿಸಲಾಗಿದೆ.




error: Content is protected !!