ದರ್ಶನ್ ಕುಟುಂಬದ ವಿರುದ್ಧದ ಸುದ್ದಿಗಳಿಗೆ ತಡೆಯಾಜ್ಞೆ ತಂದ ಪತ್ನಿ

100

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಎಂಬಾತನ ಕೊಲೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ನಟ ದರ್ಶನ್ ಹಾಗೂ ಅವರ ಕುಟುಂಬದವರಿಗೆ ಸಂಬಂಧಿಸಿದಂತೆ ಯಾವುದೇ ರೀತಿಯ ಸುದ್ದಿಗಳನ್ನು ಪ್ರಸಾರ ಮಾಡದಂತೆ ಪತ್ನಿ ವಿಜಯಲಕ್ಷ್ಮಿ ನ್ಯಾಯಾಲಯದಿಂದ ತಡೆಯಾಜ್ಞೆ ತಂದಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಘಟನೆಯ ಬಗ್ಗೆ ನೋವಿದೆ. ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಹೃದಯಪೂರ್ವಕ ಸಾಂತ್ವಾನ ತಿಳಿಸಲು ಬಯಸುತ್ತೇನೆ. ಅವರ ಅಗಲಿಕೆಯ ದುಃಖ ಭರಿಸುವ ಶಕ್ತಿಯನ್ನು ಭಗವಂತ ಅವರ ಮನೆಯವರಿಗೆ ಕೊಡಲಿ ಎಂದು ಪ್ರಾರ್ಥಿಸುತ್ತೇನೆ.

ಕಳೆದ ಕೆಲವು ದಿನಗಳಿಂದ ದರ್ಶನ್ ಅವರು, ನಾನು, ನಮ್ಮ ಮಗ, ದರ್ಶನರ ಸೆಲೆಬ್ರಿಟೀಸ್ ಮತ್ತು ಕುಟುಂಬದವರು ಪದಗಳಲ್ಲಿ ವಿವರಿಸಲಾಗದ ನೋವನ್ನು ಅನುಭವಿಸಿದ್ದೇವೆ. ಗೌರವಾನ್ವಿತ ನ್ಯಾಯಾಲಯದ ಮೇಲ್ಕಂಡ ಆದೇಶದಂತೆ ಇನ್ನುಮುಂದೆಯಾದರೂ ಅಸತ್ಯಗಳು ಹಾಗೂ ಅನಧಿಕೃತ ಮಾಹಿತಿ ಮಾಧ್ಯಮ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟವಾಗದಿರಲಿ ಎಂದು ಕೇಳಿಕೊಳ್ಳುತ್ತೇನೆ. ತಾಯಿ ಚಾಮುಂಡೇಶ್ವರಿ ಮತ್ತು ನಮ್ಮ ನ್ಯಾಯ ವ್ಯವಸ್ಥೆಯಲ್ಲಿ ನನಗೆ ಸಂಪೂರ್ಣ ನಂಬಿಕೆ ಇದೆ. ಸತ್ಯಮೇವ ಜಯತೆ! ಎಂದು ತಿಳಿಸಿದ್ದಾರೆ.




error: Content is protected !!