Ad imageAd image

ಗೇಟ್ ಬಿದ್ದು ಮೃತಪಟ್ಟ ಬಾಲಕನ ಕುಟುಂಬಕ್ಕೆ 10 ಲಕ್ಷ ರೂಪಾಯಿ ಪರಿಹಾರ

ನಗರದ ಮಲ್ಲೇಶ್ವರಂನಲ್ಲಿರುವ ಆಟದ ಮೈದಾನದ ಗೇಟ್ ಬಿದ್ದು 10 ವರ್ಷದ ನಿರಂಜನ್ ಎನ್ನುವ ಬಾಲಕ ಮೃತಪಟ್ಟ ಘಟನೆ ಭಾನುವಾರ ಸಂಜೆ 4.40ಕ್ಕೆ ನಡೆದಿದೆ.

Nagesh Talawar
ಗೇಟ್ ಬಿದ್ದು ಮೃತಪಟ್ಟ ಬಾಲಕನ ಕುಟುಂಬಕ್ಕೆ 10 ಲಕ್ಷ ರೂಪಾಯಿ ಪರಿಹಾರ
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ಬೆಂಗಳೂರು(Bengaloru): ನಗರದ ಮಲ್ಲೇಶ್ವರಂನಲ್ಲಿರುವ ಆಟದ ಮೈದಾನದ(ply Ground) ಗೇಟ್ ಬಿದ್ದು 10 ವರ್ಷದ ನಿರಂಜನ್ ಎನ್ನುವ ಬಾಲಕ ಮೃತಪಟ್ಟ ಘಟನೆ ಭಾನುವಾರ ಸಂಜೆ 4.40ಕ್ಕೆ ನಡೆದಿದೆ. ಮೃತ ಬಾಲಕನ(Boy) ಕುಟುಂಬಕ್ಕೆ ಸರ್ಕಾರ, ಬಿಬಿಎಂಪಿ ವತಿಯಿಂದ 5 ಲಕ್ಷ ಹಾಗೂ ಬ್ಲಾಕ್ ಕಾಂಗ್ರೆಸ್ ಸಮಿತಿಯಿಂದ 5 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಈ ಬಗ್ಗೆ ಸೋಮವಾರ ಮಾಧ್ಯಮದವರೊಂದಿಗೆ ಮಾತನಾಡಿ 10 ಲಕ್ಷ ರೂಪಾಯಿ ಪರಿಹಾರ ನೀಡುವ ಬಗ್ಗೆ ತಿಳಿಸಿದರು.

ಘಟನೆ ಬಗ್ಗೆ ಪರಿಶೀಲನೆ ನಡೆಸಲು ಸಮಿತಿ ರಚಿಸಲಾಗುವುದು ಎಂದು ಬಿಬಿಎಂಪಿ(BBMP) ಆಯುಕ್ತ ತುಷಾರ್ ಗಿರಿನಾಥ್ ಹೇಳಿದ್ದಾರೆ. ಈ ಹಿಂದೆ ಹಲವು ಬಾರಿ ಗೇಟ್ ಸಮಸ್ಯೆಯಾಗಿದೆ. ಈ ಬಗ್ಗೆ ಅಧಿಕಾರಿಗಳು ಯಾವುದೇ ಕ್ರಮಗಳನ್ನು ತೆಗೆದುಕೊಂಡಿಲ್ಲವೆಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಗನನ್ನು ಕಳೆದುಕೊಂಡ ಕುಟುಂಬಸ್ಥರು ಹಿಡಿ ಶಾಪ ಹಾಕುತ್ತಿದ್ದಾರೆ. ಅನಾಹುತ ತಪ್ಪಿಸುವ ಮೊದಲೇ ಎಚ್ಚೆತ್ತುಕೊಳ್ಳದ ಅಧಿಕಾರಿಗಳು, ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತವಾಗುತ್ತಿದೆ.

WhatsApp Group Join Now
Telegram Group Join Now
Share This Article