ಪ್ರಜಾಸ್ತ್ರ ಸುದ್ದಿ
ಕನಕಪುರ(Kanakapura): ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ವಿರುದ್ಧ ನೀಡಿರುವ ಹೇಳಿಕೆ ಸಂಬಂಧ ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ವಿರುದ್ಧ 100 ಕೋಟಿ ರೂಪಾಯಿ ಮಾನಹಾನಿ ಪ್ರಕರಣವನ್ನು ದಾಖಲಿಸಲಾಗಿದೆ. ಈ ಬಗ್ಗೆ ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ಇಡಿ, ಸಿಬಿಐ ಪ್ರಕರಣವನ್ನು ಹಿಂದಕ್ಕೆ ಪಡೆಯಬೇಕು ಎಂದು ನಾನು ಕೇಂದ್ರ ಸಚಿವರ ಬಳಿ ದುಂಬಾಲು ಬಿದ್ದಿದ್ದೇನೆ. ಬಿಜೆಪಿ ಸೇರುತ್ತೇನೆ ಎಂದೆಲ್ಲ ಹೇಳಿದ್ದೇನೆ ಎಂದು ಯತ್ನಾಳ್ ಹೇಳಿದ್ದಾರೆ. ಸುಳ್ಳು ಹೇಳಿದೆ ಯತ್ನಾಳ್ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದೇನೆ ಎಂದಿದ್ದಾರೆ.
100 ಕೋಟಿ ರೂಪಾಯಿಗಳಿಗೆ ಮಾನಹಾನಿ ಪ್ರಕರಣ ದಾಖಲಿಸಿದ್ದೇನೆ. ಇದಕ್ಕಾಗಿ 1 ಕೋಟಿ ರೂಪಾಯಿ ಶುಲ್ಕ ಠೇವಣಿಯನ್ನು ನ್ಯಾಯಾಲಯಕ್ಕೆ ಕಟ್ಟಿದ್ದೇನೆ. ಈ ಪ್ರಕರಣವನ್ನು ಬೆಂಗಳೂರಿನಲ್ಲಿ ನಡೆಸಬೇಕು ಎಂದು ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದೆ. ಅದು ವಜಾ ಆಗಿದೆ. ಹೀಗಾಗಿ ಕನಕಪುರದ ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿ ಭಾಗಿಯಾದೆ. ಕೆಲವು ದಾಖಲೆಗಳನ್ನು ದೃಢಪಡಿಸಬೇಕಿತ್ತು ಎಂದು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.