Ad imageAd image

10ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ

ಪಿಜಿಯಲ್ಲಿ ವಾಸವಾಗಿದ್ದ 10ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶೃಂಗೇರಿಯಲ್ಲಿ ನಡೆದಿದೆ.

Nagesh Talawar
10ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ಚಿಕ್ಕಮಗಳೂರು(Chikkamagaloru): ಪಿಜಿಯಲ್ಲಿ ವಾಸವಾಗಿದ್ದ 10ನೇ(SSLC Student) ತರಗತಿ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶೃಂಗೇರಿಯಲ್ಲಿ ನಡೆದಿದೆ. ಎಸ್.ಕೆ ಧ್ರುವ ಎನ್ನುವಂತಹ ವಿದ್ಯಾರ್ಥಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮವಾರ ಮಧ್ಯಾಹ್ನ ನಡೆದಿದೆ. ಶೃಂಗೇರಿ(Shrungeri) ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.

ಶಿವಮೊಗ್ಗ ಜಿಲ್ಲೆ ಭದ್ರತಾವತಿ ಮೂಲದ ಎಸ್.ಕೆ ಧ್ರುವ ಎನ್ನುವ ವಿದ್ಯಾರ್ಥಿ ಪಿಜಿಯಲ್ಲಿ ವಾಸವಾಗಿದ್ದುಕೊಂಡು ಶೃಂಗೇರಿಯ ಶಾಲೆಯೊಂದರಲ್ಲಿ ಓದುತ್ತಿದ್ದ. ಇಂದು ಪೂರ್ವ ಸಿದ್ಧತಾ ಪರೀಕ್ಷೆಗೆ ಗೈರಾಗಿದ್ದಾನೆ. ಆಗ ಶಾಲೆಯವರು ಪೋಷಕರಿಗೆ ಫೋನ್ ಮಾಡಿ ವಿಚಾರಿಸಿದ್ದಾರೆ. ಅವರು ಪಿಜಿಯ ಮಾಲೀಕರಿಗೆ ಫೋನ್ ಮಾಡಿದ್ದಾರೆ. ಆಗ ಆತನ ರೂಮಿಗೆ ಬಂದು ನೋಡಿದರೆ ಆತ್ಮಹತ್ಯೆ(Suicide) ಮಾಡಿಕೊಂಡಿರುವುದು ತಿಳಿದಿದೆ. ಮಗನ ಸಾವಿನಿಂದ ಕುಟುಂಬಸ್ಥರ ನೋವು ಹೇಳತೀರದಾಗಿದೆ. ಯಾವ ಕಾರಣಕ್ಕೆ ಬಾಲಕ ಆತ್ಮಹತ್ಯೆ ಮಾಡಿಕೊಂಡ ಎನ್ನುವುದು ಪೊಲೀಸ್ ತನಿಖೆಯಿಂದ ತಿಳಿದು ಬರಬೇಕಿದೆ.

WhatsApp Group Join Now
Telegram Group Join Now
Share This Article