Ad imageAd image

ಸೌದಿಯಲ್ಲಿ ಭೀಕರ ಬಸ್ ಅಪಘಾತ, ತೆಲಂಗಾಣದ 42 ಮಂದಿ ಸಾವು

Nagesh Talawar
ಸೌದಿಯಲ್ಲಿ ಭೀಕರ ಬಸ್ ಅಪಘಾತ, ತೆಲಂಗಾಣದ 42 ಮಂದಿ ಸಾವು
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ಬೆಂಗಳೂರು(Bengaloru): ಸೌದಿ ಅರೇಬಿಯಾದಲ್ಲಿ ಖಾಸಗಿ ಬಸ್ ಹಾಗೂ ಟ್ಯಾಂಕರ್ ನಡುವೆ ಭೀಕರ ಅಪಘಾತ ಸಂಭವಿಸಿ ತೆಲಂಗಾಣ ಮೂಲದ 42 ಜನರು ಸಾವನ್ನಪ್ಪಿದ್ದಾರೆ. ಮೆಕ್ಕಾ-ಮದೀನಾ ರಸ್ತೆಯಲ್ಲಿ ಅಪಘಾತ ನಡೆದಿದೆ. ಅಪಘಾತದ ತೀವ್ರತೆಗೆ ಬೆಂಕಿ ಹೊತ್ತಿಕೊಂಡಿದ್ದು, ಬಸ್ಸಿನಲ್ಲಿದ್ದವರೆಲ್ಲ ಬಲಿಯಾಗಿದ್ದಾರೆ.

ಹೈದ್ರಾಬಾದ್ ನ ನಾಂಪಲ್ಲಿಯ ಅಲ್ ಮದೀನ್ ಅಲ್ ಮೀನಾ ಟ್ರಾವೆಲ್ ಏಜನ್ಸಿಯ ಮೂಲಕ ಕಳೆದ ನವೆಂಬರ್ 9ರಂದು ಮೆಕ್ಕಾ-ಮದೀನಾ ಪ್ರವಾಸಕ್ಕೆ ತೆರಳಿದ್ದರು. ಉಮ್ರಾ ಯಾತ್ರೆ ಮುಗಿಸಿಕೊಂಡು ಭಾನುವಾರ ಮೇದಿನಾಕ್ಕೆ ಹೋಗುತ್ತಿದ್ದಾಗ ಈ ದುರ್ಘಟನೆ ನಡೆದಿದೆ. ಹೈದ್ರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಈ ಬಗ್ಗೆ ಸುದ್ದಿ ಸಂಸ್ಥೆಗೆ ಮಾಹಿತಿ ನೀಡಿದ್ದಾರೆ. ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಘಟನೆ ಬಗ್ಗೆ ಆತಂಕ ವ್ಯಕ್ತಪಡಿಸಿದ್ದು, ಮೃತರ ಆತ್ಮಕ್ಕೆ ಶಾಂತಿ ಕೋರಿದ್ದಾರೆ.

WhatsApp Group Join Now
Telegram Group Join Now
Share This Article