ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ಪ್ರಸಿದ್ಧ ಮೈಸೂರು ಸ್ಯಾಂಡಲ್ ಸೋಪ್ ರಾಯಭಾರಿಯಾಗಿ ಸೌಥ್ ಇಂಡಿಯನ್ ನಟಿ ತಮನ್ನಾ ಭಾಟಿಯಾ ಅವರನ್ನು ರಾಜ್ಯ ಸರ್ಕಾರ ನೇಮಕ ಮಾಡಿದೆ. 2 ವರ್ಷ 2 ದಿನಗಳವರೆಗೂ ನಟಿ ತಮನ್ನಾ ರಾಯಭಾರಿಯಾಗಿರಲಿದ್ದು, ಇದಕ್ಕೆ ಬರೋಬ್ಬರಿ 6.2 ಕೋಟಿ ರೂಪಾಯಿ ಸಂಭಾವನೆ ನೀಡುತ್ತಿದೆ. ಸರ್ಕಾರದ ಅಧಿಕೃತ ಆದೇಶದಲ್ಲಿ ಈ ರೀತಿ ತಿಳಿಸಲಾಗಿದೆ.
ಸರ್ಕಾರದ ಈ ನಡೆಯನ್ನು ಸಾರ್ವಜನಿಕರು ವಿರೋಧಿಸಿದ್ದಾರೆ. ಸಾರ್ವಜನಿಕರ ತೆರಿಗೆ ಹಣವನ್ನು ಈ ರೀತಿಯಲ್ಲಿ ಪೋಲು ಮಾಡುತ್ತಿರುವುದು, ದುಂದು ವೆಚ್ಚ ಮಾಡುತ್ತಿರುವುದಕ್ಕೆ ಕಿಡಿ ಕಾರುತ್ತಿದ್ದಾರೆ. ಇದಕ್ಕೆ ಸರ್ಕಾರ ಯಾವ ರೀತಿ ಉತ್ತರಿಸುತ್ತೆ ಕಾದು ನೋಡಬೇಕು.