Ad imageAd image

ವಿಕಸಿತ ಭಾರತ 140 ಕೋಟಿ ಭಾರತೀಯರ ಸಂಕಲ್ಪ: ಪ್ರಧಾನಿ ಮೋದಿ

ಪ್ರಧಾನಿ ಮೋದಿ ದೆಹಲಿಯ ಕೆಂಪುಕೋಟೆಯ ಮೇಲೆ ಧ್ವಜಾರೋಹಣ ಮಾಡುವ ಮೂಲಕ 78ನೇ ಸ್ವಾತಂತ್ರ್ಯೋತ್ಸವ ಆಚರಿಸಲಾಯಿತು. ಈ ಮೂಲಕ ಐತಿಹಾಸಿಕ ದಾಖಲೆಯನ್ನು ಸಹ ಮಾಡಿದರು.

Nagesh Talawar
ವಿಕಸಿತ ಭಾರತ 140 ಕೋಟಿ ಭಾರತೀಯರ ಸಂಕಲ್ಪ: ಪ್ರಧಾನಿ ಮೋದಿ
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ನವದೆಹಲಿ(New Delhi): ಪ್ರಧಾನಿ ಮೋದಿ ದೆಹಲಿಯ ಕೆಂಪುಕೋಟೆಯ(Red fort) ಮೇಲೆ ಧ್ವಜಾರೋಹಣ ಮಾಡುವ ಮೂಲಕ 78ನೇ ಸ್ವಾತಂತ್ರ್ಯೋತ್ಸವ(Independence day) ಆಚರಿಸಲಾಯಿತು. ಈ ಮೂಲಕ ಐತಿಹಾಸಿಕ ದಾಖಲೆಯನ್ನು ಸಹ ಮಾಡಿದರು. 3ನೇ ಅವಧಿಗೆ ಪ್ರಧಾನಿಯಾಗಿರುವ ಅವರು ನೆಹರು, ಇಂದಿರಾ ಗಾಂಧಿ ನಂತರದಲ್ಲಿ ಈ ಸಾಧನೆ ಮಾಡಿದವರಾಗಿದ್ದಾರೆ.

ಧ್ವಜಾರೋಹಣಕ್ಕೂ ಮೊದಲು ರಾಜ್ ಘಾಟ್ ನಲ್ಲಿರುವ ಮಹಾತ್ಮ(mahatma gandhi) ಗಾಂಧಿಯವರ ಸಮಾಧಿಗೆ ಗೌರವ ನಮನ ಸಲ್ಲಿಸಿದರು. ನಂತರ ಅಲ್ಲಿಂದ ಕೆಂಪುಕೋಟೆಯತ್ತ ಪ್ರಯಾಣ ಬೆಳೆಸಿದರು. ಮೂರು ಸೇನಾ ಪಡೆಗಳಿಂದ ಗೌರವ ಸಲ್ಲಿಸಲಾಯಿತು. ನಂತರ ಧ್ವಜಾರೋಹಣ ನೆರವೇರಿಸಿದರು. ಈ ವೇಳೆ ಮಾತನಾಡಿದ ಅವರು, ವಾಯನಾಡ್ ಸಂತ್ರಸ್ತರು ಸೇರಿದಂತೆ ಪ್ರಕೃತಿ ವಿಕೋಪದಿಂದ ಜೀವ ಕಳೆದುಕೊಂಡ ಪ್ರತಿಯೊಬ್ಬರ ಕುಟುಂಬಕ್ಕೂ ಸಂತಾಪ ಸೂಚಿಸಿದರು.

2047ರ ವೇಳೆಗೆ ವಿಕಸಿತ ಭಾರತ ಗುರಿಯನ್ನು ಹೊಂದಲಾಗಿದೆ. ಇದು 140 ಕೋಟಿ ಭಾರತೀಯರ ಕನಸಾಗಿದೆ ಹಾಗೂ ಸಂಕಲ್ಪವಾಗಿದೆ. ಈ ಮೂಲಕ ಭಾರತ ಅಭಿವೃದ್ಧಿ ಹೊಂದಿದ ದೇಶವಾಗಲಿದೆ ಎಂದರು. ದೇಶಕ್ಕಾಗಿ ಪ್ರಾಣ ಅರ್ಪಿಸಿದ ಹೋರಾಟಗಾರರೆಲ್ಲರನ್ನು ಸ್ಮರಿಸಿಕೊಳ್ಳುವ ದಿನವೆಂದು ಹೇಳಿದರು. ಈ ವೇಳೆ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ, ಕೇಂದ್ರ ಗೃಹ ಸಚವಿ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ವಿತ್ ಸಚಿವೆ ನಿರ್ಮಲಾ ಸೀತಾರಾಮನ್ ಸೇರಿದಂತೆ ಗಣ್ಯಾತಿಗಣ್ಯರು, ವಿಶೇಷ ಆಹ್ವಾನಿತರು ಭಾಗವಹಿಸಿದ್ದರು.

WhatsApp Group Join Now
Telegram Group Join Now
Share This Article