Ad imageAd image

ಕೊಪ್ಪಳ: 30ಕ್ಕೂ ಹೆಚ್ಚು ಜನರ ಮೇಲೆ ನಾಯಿ ದಾಳಿ

Nagesh Talawar
ಕೊಪ್ಪಳ: 30ಕ್ಕೂ ಹೆಚ್ಚು ಜನರ ಮೇಲೆ ನಾಯಿ ದಾಳಿ
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ (ಸಾಂದರ್ಭಿಕ ಚಿತ್ರ)

ಕೊಪ್ಪಳ(Koppala): ಬೀದಿನಾಯಿಯೊಂದು 30ಕ್ಕೂ ಹೆಚ್ಚು ಜನರ ಮೇಲೆ ದಾಳಿ ಮಾಡಿದ್ದು, ಬಾಲಕನೊಬ್ಬನಿಗೆ ಗಂಭೀರವಾದ ಗಾಯಗಳಾದ ಘಟನೆ ಕುಕನೂರು ತಾಲೂಕಿನ ತಳಕಲ್-ತಳಬಾಳ ಗ್ರಾಮದಲ್ಲಿ ಶನಿವಾರ ನಡೆದಿದೆ. 8 ವರ್ಷದ ಯಮನೂರಸಾಬ್ ನದಾಫ್ ಎನ್ನುವ ಬಾಲಕ ಗಂಭೀರವಾಗಿ ಗಾಯಗೊಂಡಿದ್ದಾನೆ.

ಬಾಲಕನಿಗೆ ಮೊದಲು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ನಂತರ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಏಕಾಏಕಿ ರಸ್ತೆಯಲ್ಲಿ ಕಂಡ ಕಂಡವರ ಮೇಲೆ ನಾಯಿ ದಾಳಿ ಮಾಡಿದೆ. ಇದರಿಂದಾಗಿ 30ಕ್ಕೂ ಹೆಚ್ಚು ಜನರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

WhatsApp Group Join Now
Telegram Group Join Now
Share This Article